Advertisement

ಕಾಶ್ಮೀರದಲ್ಲಿ ಒಳ ನುಸುಳಲು ಯತ್ನ: ಇಬ್ಬರು ಉಗ್ರರ ಸಾವು

01:17 AM Jun 23, 2024 | Team Udayavani |

ಶ್ರೀನಗರ: ಜಮ್ಮು-ಕಾಶ್ಮೀರದ ಬರಾಮುಲ್ಲಾ ಜಿಲ್ಲೆಯಲ್ಲಿನ ಉರಿ ಸೆಕ್ಟರ್‌ನ ಎಲ್‌ಒಸಿ (ಗಡಿ ನಿಯಂತ್ರಣ ರೇಖೆ) ಮೂಲಕ ಒಳನುಸುಳಲು ಯತ್ನಿಸಿದ ಇಬ್ಬರು ಭಯೋತ್ಪಾದಕರನ್ನು ಭದ್ರತಾ ಪಡೆ ಹತ್ಯೆಗೈದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಭಾಗದಲ್ಲಿ ಅನುಮಾನಾಸ್ಪದ ಚಟುವಟಿಕೆಯನ್ನು ಗಮನಿಸಿದ ಸೇನಾಪಡೆಗಳು ಗುಂಡು ಹಾರಿಸಿದವು. ಕೆಲಕಾಲ ಗುಂಡಿನ ಚಕಮಕಿ ನಡೆದಿದ್ದು ಬಳಿಕ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಭಯೋತ್ಪಾದಕರು ಹತರಾಗಿದ್ದಾರೆ ಎನ್ನಲಾಗಿದೆ. ಸೇನಾಪಡೆಗಳು ಉಗ್ರರ ಮೃತದೇಹಕ್ಕಾಗಿ ಯೋಧರು ಶೋಧ ನಡೆಸುತ್ತಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next