Advertisement

ಗಡಿ ನಿಯಂತ್ರಣ ರೇಖೆಯಲ್ಲಿ ಒಳನುಸುಳುವಿಕೆಯ ಯತ್ನ ವಿಫಲಗೊಳಿಸಿದ ಸೇನೆ

02:58 PM Aug 25, 2022 | Team Udayavani |

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆಯ ಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ.

Advertisement

ಉತ್ತರ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಉರಿ ಸೆಕ್ಟರ್‌ನ ಕಮಲ್‌ಕೋಟೆ ಪ್ರದೇಶದಲ್ಲಿ ನಿಯಂತ್ರಣ ರೇಖೆಯ ಉದ್ದಕ್ಕೂ ಅನುಮಾನಾಸ್ಪದ ಚಲನವಲನವನ್ನು ಸೇನಾ ಪಡೆಗಳು ಗಮನಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಯೋಧರು ಒಳನುಗ್ಗಲು ಯತ್ನಿಸಿದವರಿಗೆ ಸವಾಲು ಹಾಕಿ ಗುಂಡಿನ ಚಕಮಕಿ ನಡೆಸಿದರು. ಮಂಜು ಮುಸುಕಿದ ವಾತಾವರಣ ಸೇರಿದಂತೆ ಪ್ರತಿಕೂಲ ಹವಾಮಾನದಿಂದಾಗಿ, ಒಳನುಗ್ಗಲು ಯತ್ನಿಸಿದವರ ಸ್ಥಿತಿ ಏನಾಗಿದೆ ಎಂದು ತಕ್ಷಣವೇ ತಿಳಿದಿಲ್ಲ, ಅಧಿಕಾರಿಗಳು ಶೋಧ ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ ಎಂದು ಸೇನಾ ಮೂಲಗಳು ಹೇಳಿವೆ.

Advertisement

Udayavani is now on Telegram. Click here to join our channel and stay updated with the latest news.

Next