Advertisement
ನಗರದ ಕರ್ನಾಟಕ ಸಂಘದ 2016ನೇ ಸಾಲಿನ ಪುಸ್ತಕ ಬಹುಮಾನ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದ ಅವರು, ಎಲ್ಲಾ ವಿಚಾರಗಳ ಬಗ್ಗೆಯೂ ಕನ್ನಡದಲ್ಲಿ ಸಾಹಿತ್ಯ ಪ್ರಕಟವಾಗಬೇಕು. ಆಗ ಮಾತ್ರ ಭಾಷೆ ಮತ್ತಷ್ಟು ಶ್ರೀಮಂತಗೊಳ್ಳುತ್ತದೆ. ಜತೆಗೆ ಸದೃಢವಾಗುತ್ತದೆ ಎಂದು ಹೇಳಿದರು. ಪ್ರಸ್ತುತ ಆಧುನಿಕ ಕಾಲಘಟ್ಟದಲ್ಲಿ ಪ್ರತಿಯೊಂದು ಮಾಹಿತಿ ಅಂತರ್ಜಾಲ ತಾಣದ ಮೂಲಕ ದೊರಕುತ್ತಿದೆ. ಹಾಗೆ ಸಿಕ್ಕ ಮಾಹಿತಿಯನ್ನು ಕೃತಿಯ ರೂಪಕ್ಕೆ ಇಳಿಸಿದರೆ ತಪ್ಪುಗಳು ಆಗುತ್ತದೆ. ಸಾಮಾಜಿಕ ಜಾಲತಾಣಗಳಲ್ಲಿ ನಾವು ಪಡೆಯುವ ಮಾಹಿತಿಯನ್ನೇಜ್ಞಾನ ಎಂದು ಅರ್ಥೈಸಿಕೊಳ್ಳುತ್ತಿದ್ದೇವೆ. ಮಾಹಿತಿ ಸಮಸ್ಯೆಗೆ ಪರಿಹಾರವಾಗಬಲ್ಲದೇ ಹೊರತು ಜ್ಞಾನವಾಗುವುದಿಲ್ಲ. ನಾವು ಪಡೆದ ಮಾಹಿತಿ ಅರಿವಾಗಿ ಪರಿವರ್ತನೆಯಾದರೆ ಅದು ಜ್ಞಾನ ಎನಿಸಿಕೊಳ್ಳುತ್ತದೆ ಎಂದರು.
Related Articles
ಕುವೆಂಪು ಪ್ರಶಸ್ತಿ- ರೇಖಾ ಕಾಖಂಡಕಿ- ವೈವಸ್ವತ ಕಾದಂಬರಿ, ಪ್ರೊ| ಎಸ್.ವಿ. ಪರಮೇಶ್ವರ ಭಟ್ಟ ಪ್ರಶಸ್ತಿ- ಡಿ.ಎನ್.ಶ್ರೀನಾಥ್-ಅಸ್ಸಾಮಿ ಅನುವಾದಿತ ಕೃತಿಗೆ, ಎಂ. ಕೆ. ಇಂದಿರಾ ಪ್ರಶಸ್ತಿ- ಮಧುರಾ ಕರ್ಣಮ್- ಆಲದ ನೆರಳು ಕೃತಿಗೆ, ಪಿ. ಲಂಕೇಶ್ ಪ್ರಶಸ್ತಿ – ಡಾ.ಮಿರ್ಜಾ ಬಷೀರ್-ಜಿನ್ನಿ ಕೃತಿಗೆ, ಡಾ| ಜಿ. ಎಸ್. ಶಿವರುದ್ರಪ್ಪ ಪ್ರಶಸ್ತಿ-ವಾಸುದೇವ ನಾಡಿಗ್-ಅಲೆ ತಾಕಿದರೆ ದಡ ಕವನ ಸಂಕಲನಕ್ಕೆ, ಡಾ| ಹಾ.ಮಾ. ನಾಯಕ ಪ್ರಶಸ್ತಿ- ಡಾ|
ಜಿ.ಎಸ್.ಭಟ್ಟ- ಮಲೆಯ ಮಾತು ಅಂಕಣ ಬರಹಕ್ಕೆ, ಡಾ| ಯು. ಆರ್. ಅನಂತಮೂರ್ತಿ ಪ್ರಶಸ್ತಿ-ಎಚ್.ಬಿ. ಇಂದ್ರಕುಮಾರ್-ಕಾಣದ ಕಡಲು ಸಣ್ಣ ಕಥಾ ಸಂಕಲನಕ್ಕೆ, ಡಾ| ಕೆ.ವಿ. ಸುಬ್ಬಣ್ಣ ಪ್ರಶಸ್ತಿ-ಸುಬ್ರಾವ ಕುಲಕರ್ಣಿ- ಓಕುಳಿ ಹಾಗೂ ಇತರ ನಾಟಕಗಳು, ಕುಕ್ಕೆ ಸುಬ್ರಹ್ಮಣ್ಯ ಪ್ರಶಸ್ತಿ- ಎಂ.ಜಾನಕಿ ಬ್ರಹ್ಮಾವರ- ನೈಲ್ ನದಿಯ ನಾಡಿನಲ್ಲಿ ಪ್ರವಾಸ ಕಥನಕ್ಕೆ, ಹಸೂಡಿ ವೆಂಕಟಶಾಸ್ತ್ರಿ ಪ್ರಶಸ್ತಿ-ಡಾ| ಎ.ಎಸ್. ಕುಮಾರಸ್ವಾಮಿ- ಅಂತರ್ಜಲ ಬಳಕೆ ವಿಜ್ಞಾನ ಕೃತಿಗೆ, ನಾ. ಡಿಸೋಜ ಪ್ರಶಸ್ತಿ- ಮತ್ತೂರು ಸುಬ್ಬಣ್ಣ- ಮಕ್ಕಳ ಕಥಾ ಲೋಕ ಮಕ್ಕಳ ಸಾಹಿತ್ಯಕ್ಕೆ ಹಾಗೂ ಡಾ| ಎಚ್. ಡಿ. ಚಂದ್ರಪ್ಪ ಗೌಡ- ಡಾ| ಎಚ್.ಎಸ್. ಮೋಹನ್- ವೈದ್ಯ ವಿನೂತನ ಕೃತಿಗೆ ಪ್ರಶಸ್ತಿ ನೀಡಲಾಯಿತು.
Advertisement