Advertisement
ಅವರು ಶನಿವಾರ ಬ್ರಹ್ಮಾವರದಲ್ಲಿ ಆರೋಗ್ಯ ವ್ಯವಸ್ಥೆ ಅಭಿವೃದ್ಧಿ ಮತ್ತು ಸುಧಾರಣೆ ಯೋಜನೆಯನ್ವಯ ನಿರ್ಮಿಸಲಾದ ಸಮುದಾಯ ಆರೋಗ್ಯ ಕೇಂದ್ರದ ನೂತನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರಕ್ಕೆ ನೇಮಕವಾದ ಹೆರಿಗೆ ತಜ್ಞರನ್ನು ಉಡುಪಿಗೆ ನಿಯೋಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅವರನ್ನು ಇಲ್ಲಿಗೇ ನೇಮಕ ಮಾಡುವಲ್ಲಿ ಕಾರ್ಯನಿರ್ವಹಿಸುತ್ತೇನೆ. ಪ್ರಮೋದ್ ಮಧ್ವರಾಜ್ ಅವರು ಸಚಿವರಾಗಿದ್ದ ಅವಧಿಯಲ್ಲಿ ಉಡುಪಿ ಕ್ಷೇತ್ರಕ್ಕೆ 2,000 ಕೋಟಿ ರೂ.ಗೂ ಮಿಕ್ಕಿದ ಅನುದಾನ ತಂದಿದ್ದರು. ಈ ಕಟ್ಟಡವೂ ಅವರ ಅವಧಿಯಲ್ಲೇ ಮಂಜೂರಾಗಿತ್ತು ಎಂದು ಡಾ| ಜಯಮಾಲಾ ತಿಳಿಸಿದರು.
Related Articles
Advertisement
ಸಮ್ಮಾನಉತ್ತಮವಾಗಿ ಸೇವೆ ಸಲ್ಲಿಸುತ್ತಿರುವ ವೈದ್ಯಾ ಧಿಕಾರಿಗಳನ್ನು ಮತ್ತು ಆರೋಗ್ಯ ಕೇಂದ್ರದ ಕಟ್ಟಡ ನಿರ್ಮಿಸಿದ ಪ್ರಭಾಕರ್ ಯೆಯ್ನಾಡಿ ಅವರನ್ನು ಸಮ್ಮಾನಿಸಲಾಯಿತು.ತಾಲೂಕು ಆರೋಗ್ಯಾ ಧಿಕಾರಿ ಡಾ| ನಾಗರತ್ನಾ ಸ್ವಾಗತಿಸಿ, ಮಂಜುನಾಥ್ ಕಾರ್ಯಕ್ರಮ ನಿರ್ವಹಿಸಿದರು.