Advertisement

ಅರಣ್ಯ ಪ್ರದೇಶದಲ್ಲಿ ಇಂಗು ಗುಂಡಿ

03:03 PM Jul 02, 2020 | mahesh |

ಕನಕಗಿರಿ: ತಾಲೂಕಿನ ಹಿರೇಖೇಡಾ ಗ್ರಾಪಂ ವ್ಯಾಪ್ತಿಯ ಕೆ. ಕಾಟಾಪುರ ಗ್ರಾಮದ ಹತ್ತಿರದ ಅರಣ್ಯ ಪ್ರದೇಶದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಕಾರ್ಮಿಕರು ಸುಮಾರು 400 ಇಂಗು ಗುಂಡಿಗಳನ್ನು ನಿರ್ಮಿಸಿದ್ದಾರೆ. ಈ ಕುರಿತು ತಾಪಂ ಇಒ ಡಾ| ಡಿ. ಮೋಹನ್‌ ಮಾತನಾಡಿ, ಕೂಲಿ ಕಾರ್ಮಿಕರಿಗೆ 15 ದಿನಗಳ ಕಾಲ ಮಹಾತ್ಮ ಗಾಂಧಿ  ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ನೀಡಲಾಗಿದೆ. ಹಿರೇಖೇಡಾ ಗ್ರಾಪಂ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಸುಮಾರ 400 ಇಂಗು ಗುಂಡಿ ನಿರ್ಮಾಣ ಮಾಡುವುದರಿಂದ ನೀರು ಮತ್ತು ಮಣ್ಣಿನ ಸಂರಕ್ಷಣೆ
ಮಾಡಿದಂತಾಗುತ್ತದೆ. ಕಾಡು ಪ್ರಾಣಿಗಳಿಗೆ ನೀರು ಕುಡಿಯಲು ಅನುಕೂಲ ಮಾಡಿದಂತಾಗುತ್ತದೆ. ಇದರಿಂದ ಅಂತರ್ಜಲ ಮಟ್ಟವು ಹೆಚ್ಚಳವಾಗುತ್ತದೆ ಎಂದರು. ಸಾಮಾಜಿಕ ಅರಣ್ಯಾಧಿಕಾರಿ ನಾಗರಾಜ, ಸಿಬ್ಬಂದಿ, ಕೂಲಿ ಕಾರ್ಮಿಕರು ಸೇರಿದಂತೆ ಇತರರು ಇದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next