Advertisement

ಚಿಕ್ಕಮಗಳೂರು: ಮಗಳ ನಿಶ್ಚಿತಾರ್ಥದ ಊಟಕ್ಕೆಂದು ಮನೆಯಲ್ಲಿ ಸಾಕಿದ್ದ ಹಸುವನ್ನೇ ಕಡಿದರು!

10:08 AM Sep 19, 2022 | Team Udayavani |

ಚಿಕ್ಕಮಗಳೂರು: ಮನೆಯ ಮಗಳ ನಿಶ್ಚಿತಾರ್ಥಕ್ಕೆಂದು ಬರುವ ಬಂಧುಗಳಿಗೆ ಉತ್ತಮ ಊಟದ ಏರ್ಪಾಟು ಮಾಡುವುದು ಸಹಜ. ಒಂದೊಂದು ಕಡೆ ಒಂದೊಂದು ರೀತಿಯ ಆಹಾರವನ್ನು ತಯಾರಿಸುತ್ತಾರೆ. ಆದರೆ ಮನೆಯಲ್ಲಿ ಸಾಕಿಕೊಂಡು ಬಂದ ಹಸುವನ್ನೇ ಕೊಂದು ಊಟ ತಯಾರಿ ಮಾಡಿದಂತಹ ಅಮಾನವೀಯ ಘಟನೆಯೊಂದು ನಡೆದಿದೆ.

Advertisement

ಈ ಘಟನೆ ನಡೆದಿರುವುದು ಚಿಕ್ಕಮಗಳೂರು ಜಿಲ್ಲೆಯಲ್ಲಿ. ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಈಚಿಕೆರೆ ಗ್ರಾಮದ ರೋಷನ್ ಎಂಬುವರ ಮನೆಯಲ್ಲಿ ನಿಶ್ಚಿತಾರ್ಥ ಕಾರ್ಯಕ್ರಮ ಏರ್ಪಾಡಾಗಿತ್ತು. ಆದರೆ ಮಗಳ ನಿಶ್ಚಿತಾರ್ಥಕ್ಕೆಂದು ಮನೆಯಲ್ಲಿ ಸಾಕಿದ್ದ ಹಸುವನ್ನೇ ಕಡಿದಿದ್ದಾರೆ. ಹಸುವನ್ನು ಕಡಿದು ಮಾಂಸ ಬೇರ್ಪಡಿಸುವಾಗ ಪೊಲೀಸರು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ:ಉಡುಪಿ : ಉಭಯ ಜಿಲ್ಲೆಯಲ್ಲಿ ಅರಣ್ಯ ಪ್ರಮಾಣ ಹೆಚ್ಚಳ, ಸ್ಯಾಟಲೈಟ್‌ ಸರ್ವೇ

ಈಚಿಕೆರೆಯ ಮನೆಯೊಂದರಲ್ಲಿ ನಿಶ್ಚಿತಾರ್ಥಕ್ಕೆ ಬಂದವರಿಗೆ ಮನೆಯಲ್ಲಿ ಸಾಕಿದ್ದ ಹಸುವಿನ ಮಾಂಸ ಬಡಿಸಲಾಗುತ್ತಿದೆ ಎಂಬವಿಷಯ ತಿಳಿದ ಎನ್.ಆರ್.ಪುರ ಪೊಲೀಸರು ದಾಳಿ ನಡೆಸಿದ್ದಾರೆ. ಸ್ಥಳದಲ್ಲಿ ಇಬ್ಬರನ್ನು ಬಂಧಿಸಿರುವ ಪೊಲೀಸರು, ತಲೆಮರೆಸಿಕೊಂಡಿರೋ ಮೂವರಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next