Advertisement

ಶಿರಸಿ : ಉಳ್ವೇಕರ್ ಪರವಾಗಿ ಸಚಿವ ಶಿವರಾಮ ಹೆಬ್ಬಾರ್ ಮತಯಾಚನೆ

05:40 PM Nov 27, 2021 | Team Udayavani |

ಶಿರಸಿ : ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ತಾಲೂಕಿನ ಬನವಾಸಿಯಲ್ಲಿ ಜನಪ್ರತಿನಿಧಿಗಳ ಪೂರ್ವಭಾವಿ ಸಭೆ ನಡೆಸಿ, ಪಕ್ಷದ ಅಭ್ಯರ್ಥಿ ಗಣಪತಿ ಉಳ್ವೇಕರ್ ಪರವಾಗಿ ಶನಿವಾರ ಮತಯಾಚಿಸಿದರು.

Advertisement

ಉತ್ತರ ಕನ್ನಡ ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಗಣಪತಿ ಉಳ್ವೇಕರ್ ಅವರಿಗೆ ಪ್ರಾಶಸ್ತ್ಯದ ಮತ ನೀಡಿ ಅತ್ಯಧಿಕ ಮತಗಳಿಂದ ಆಯ್ಕೆ ಮಾಡುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ವೆಂಕಟೇಶ ನಾಯಕ, ಅಭ್ಯರ್ಥಿ ಗಣಪತಿ ಉಳ್ವೇಕರ್, ಸಹ ಪ್ರಭಾರಿ ಎನ್.ಎಸ್.ಹೆಗಡೆ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋವಿಂದ ನಾಯ್ಕ, ಚಂದ್ರು ಎಸಳೆ, ಉಷಾ ಹೆಗಡೆ ಹಾಗೂ ಪಕ್ಷದ ವಿವಿಧ ಸ್ಥರದ ಪದಾಧಿಕಾರಿಗಳು, ಕಾರ್ಯಕರ್ತರು, ಸ್ಥಳೀಯ ಸಂಸ್ಥೆಗಳ ಚುನಾಯಿತ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next