Advertisement

Lingayat ಅಧಿಕಾರಿಗಳಿಗೆ ಅನ್ಯಾಯ; ಯಾವುದೇ ನೋಟಿಸ್ ಬಂದಿಲ್ಲ:ಶಾಮನೂರು

08:31 PM Oct 06, 2023 | Team Udayavani |

ದಾವಣಗೆರೆ: ಕಾಂಗ್ರೆಸ್ ಸರ್ಕಾರದಲ್ಲಿ ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಿದೆ ಎಂಬುದಾಗಿ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ತಮಗೆ ಯಾವುದೇ ನೋಟಿಸ್ ಬಂದಿಲ್ಲ ಎಂದು ಹಿರಿಯ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ತಿಳಿಸಿದರು.

Advertisement

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಹೈಕಮಾಂಡ್‌ನಿಂದ ಯಾವುದೇ ನೋಟಿಸ್ ಬಂದಿಲ್ಲ. ಸಿದ್ದರಾಮಯ್ಯ ಜತೆ ನಡೆಸಿರುವ, ಮುಂದೆ ನಡೆಸುವ ಮಾತುಕತೆಯ ಬಗ್ಗೆ ಬಹಿರಂಗವಾಗಲಿ ಇಲ್ಲವೇ ಮಾಧ್ಯಮಗಳಲ್ಲಿ ಹೇಳುವುದಕ್ಕೆ ಆಗುವುದಿಲ್ಲ ಎಂದು ತಿಳಿಸಿದರು.

ಮತ್ತೆ ಏನಾದರೂ ಮುಖ್ಯಮಂತ್ರಿಗಳ ಜತೆ ಸಭೆ ಇದೆಯೇ ಎಂಬ ಪ್ರಶ್ನೆಗೆ, ಮುಖ್ಯಮಂತ್ರಿ ಅವರೊಂದಿಗೆ ಸಭೆ ನಡೆಸುವ ಬಗ್ಗೆ ಹೇಳಲಿಕ್ಕೆ ಆಗುವುದಿಲ್ಲ. ಈ ವಿಚಾರವಾಗಿ ಮಾಧ್ಯಮದವರು ಅವರನ್ನೇ ಕೇಳಿ, ನನ್ನನ್ನು ಕೇಳಬೇಡಿ ಎಂದರು.
ಲಿಂಗಾಯತ ಸಮುದಾಯದ ಅಧಿಕಾರಿಗಳ ಪಟ್ಟಿ ಬಿಡುಗಡೆ ಕುರಿತಂತೆ ಕೇಳಲಾದ ಪ್ರಶ್ನೆಗೆ, ಹುಚ್ಚುಚ್ಚು ಪ್ರಶ್ನೆ ಕೇಳಬೇಡಿ. ನಾನು ಸರ್ಕಾರದ ವಿರುದ್ಧ ಯಾವುದೇ ಬಾಂಬ್ ಹಾಕಿಲ್ಲ ಎಂದು ಗರಂ ಆದರು.

ಲಿಂಗಾಯತ ಅಧಿಕಾರಿಗಳಿಗೆ ಅನ್ಯಾಯವಾಗಿಲ್ಲ ಎಂಬುದಾಗಿ ಎಸ್.ಎಸ್. ಮಲ್ಲಿಕಾರ್ಜುನ್ ಹೇಳಿದ್ದಾರಲ್ಲ ಎಂಬ ಪ್ರಶ್ನೆಗೆ, ಅವರು(ಎಸ್.ಎಸ್. ಮಲ್ಲಿಕಾರ್ಜುನ್) ಹೇಳಿದ ಮೇಲೆ ಎಲ್ಲಾ ಮುಗಿಯಿತು. ಮತ್ತೇನು ಇಲ್ಲ ಎಂದರು.

ದಾವಣಗೆರೆಯಲ್ಲಿ ಡಿ.23 ಮತ್ತು24 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24 ನೇ ಅಧಿವೇಶನ ನಡೆಯಲಿದೆ. 10 ಲಕ್ಷಕ್ಕೂ ಹೆಚ್ಚು ಜನರು ಸೇರಿದರೆ ಅದು ಶಕ್ತಿ ಪ್ರದರ್ಶನ ಆಗುತ್ತದೆ.ನಮ್ಮ ಅಧಿವೇಶನ ಲಿಂಗಾಯತ ಸಮುದಾಯದ ಶಕ್ತಿ ಪ್ರದರ್ಶನ ಅಲ್ಲ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next