Advertisement

ನಂದಳಿಕೆ ಗೋಳಿಕಟ್ಟೆಯಲ್ಲಿ ಶಾಸನ ಪತ್ತೆ

04:33 PM Oct 20, 2021 | Team Udayavani |

ಶಿರ್ವ: ಕಾರ್ಕಳ ತಾಲೂಕಿನ ನಂದಳಿಕೆ ಗ್ರಾಮದ ಗೋಳಿಕಟ್ಟೆ ಎಂಬಲ್ಲಿ ಶಿರ್ವದ ಮೂಲ್ಕಿ ಸುಂದರ್‌ ರಾಮ್‌ ಶೆಟ್ಟಿ ಕಾಲೇಜಿನ ಪುರಾತತ್ವ ಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ಶಾಸನವನ್ನು ಪತ್ತೆ ಹಚ್ಚಿದ್ದಾರೆ ಎಂದು ಕಾಲೇಜಿನ  ಪುರಾತತ್ವ ವಿಭಾಗದ ಮುಖ್ಯಸ್ಥ ಪ್ರೊ|ಟಿ.ಮುರುಗೇಶಿ ತಿಳಿಸಿದ್ದಾರೆ.

Advertisement

ಕಾರ್ತಿಕ್‌, ಗೌತಮ್‌, ಶ್ರೇಯಸ್‌ಅವರು ಶಾಸನವನ್ನು ಪತ್ತೆಹಚ್ಚಿದ್ದು, ಕನ್ನಡ ಲಿಪಿ ಮತ್ತು ಭಾಷೆಯಲ್ಲಿರುವ ಈ ಶಾಸನ 8 ಸಾಲಿನಲ್ಲಿ ಬರೆಯಲ್ಪಟ್ಟಿದೆ. ದೀರ್ಘ‌ ಲಿಂಗಾಕೃತಿಯ ಕಲ್ಲಿನ ಒಂದು ಪಾರ್ಶ್ವದ ಮೇಲೆ, ವೃತ್ತಾಕಾರದ ಸೂರ್ಯ, ಅದರ ಕೆಳಭಾಗದಲ್ಲಿ ಅರ್ಧ ಚಂದ್ರಾಕೃತಿಯನ್ನು ಕೊರೆಯಲಾಗಿದೆ. ಈ ಚಿತ್ರಗಳ ಕೆಳಭಾಗದಲ್ಲಿ ದೊಡ್ಡ ದೊಡ್ಡ ಅಕ್ಷರಗಳ ಬರವಣಿಗೆಯಿದ್ದು, ಈ ಕಲ್ಲು ಸುಮಾರು 167 ಸೆ.ಮೀ. ಎತ್ತರವಿದೆ.

ಇದನ್ನೂ ಓದಿ: ಸ್ವಚ್ಛ ಶಿರ್ವ-ನಮ್ಮ ಶಿರ್ವ ಅಭಿಯಾನ: ಕಸ ತ್ಯಾಜ್ಯ ನಿರ್ಮೂಲನೆಗೆ ಪಣತೊಟ್ಟ ಗ್ರಾ.ಪಂ.ಅಧ್ಯಕ್ಷ

1905 ರಲ್ಲಿ ಮರಣ ಹೊಂದಿದ ಬೆಯ ಅಂಕಯ್ಯ ಶೆಟ್ರ ಮರಣ ದಾಖಲೆಯಿದಾಗಿದ್ದು, ನಂದಳಿಕೆ ಗ್ರಾಮದ ಗೋಳಿಕಟ್ಟೆಯಲ್ಲಿ ಬೆಯ ಮನೆತನದ ಮನೆಯಿದೆ. ಸುಮಾರು 116 ವರ್ಷಗಳ ಹಿಂದೆ ಮರಣ ಹೊಂದಿದ ಬೆಣಿಯ ಅಂಕಯ್ಯ ಶೆಟ್ಟಿ ಆ ಕಾಲದ ಪ್ರಸಿದ್ಧ ವ್ಯಕ್ತಿಯಾಗಿದ್ದಿರಬೇಕು. ಆ ವ್ಯಕ್ತಿಯ ಮರಣಾ ನಂತರ ಅವರ ಅಂತ್ಯ ಸಂಸ್ಕಾರದ ಜಾಗದಲ್ಲಿ ಈ ವಿಶಿಷ್ಠವಾದ ಕಲ್ಲನ್ನು ನಿಲ್ಲಿಸಲಾಗಿದೆ.

20ನೇ ಶತಮಾನದ ಆದಿ ಭಾಗದಲ್ಲೂ ಶಾಸನಗಳನ್ನು ಬರೆಸುವ ಪದ್ಧತಿ ಕರಾವಳಿಯಲ್ಲಿ ಜೀವಂತವಾಗಿತ್ತು ಎನ್ನುವುದಕ್ಕೆ ಈ ಶಾಸನ ಉತ್ತಮ ಉದಾಹರಣೆಯಾಗಿದೆ ಎಂದು ಪ್ರೊ| ಮುರಗೇಶಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next