Advertisement

ವಿಶೇಷ ರೈತ ಪ್ಯಾಕೇಜ್‌ಗೆ ಒತ್ತಾಯ

05:28 PM Apr 16, 2020 | Team Udayavani |

ಹಾವೇರಿ: ಲಾಕ್‌ಡೌನ್‌ನಿಂದಾಗಿ ರೈತರಿಗೆ ದೊಡ್ಡ ಪ್ರಮಾಣದಲ್ಲಿ ತೊಂದರೆಯಾಗಿದ್ದು ಸರ್ಕಾರ ಕೂಡಲೇ ಪ್ರಸಕ್ತ ಮುಂಗಾರು ಹಂಗಾಮಿಗೆ  ಶೇ. 50ರ ರಿಯಾಯಿತಿಯಲ್ಲಿ ಬೀಜ, ರಸಗೊಬ್ಬರ ಹಾಗೂ ಕ್ರಿಮಿನಾಶಕ ಒದಗಿಸುವ ವ್ಯವಸ್ಥೆ ಮಾಡಬೇಕು ಎಂದು ಜೆಡಿಎಸ್‌ ಜಿಲ್ಲಾ ಘಟಕದ ಪದಾಧಿಕಾರಿಗಳು ಅಪರ ಜಿಲ್ಲಾಧಿಕಾರಿ ಯೋಗೇಶ್ವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.

Advertisement

ಲಾಕ್‌ಡೌನ್‌ನಿಂದಾಗಿ ಕೃಷಿ ಉತ್ಪನ್ನಗಳ ಸುಗಮ ಮಾರಾಟ, ಸಾಗಾಣಿಕೆ ಮತ್ತು ಸೂಕ್ತ ಮಾರುಕಟ್ಟೆ ವ್ಯವಸ್ಥೆಯಾಗದೇ ರೈತರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿದ್ದಾರೆ. ರಾಜ್ಯ ಸರ್ಕಾರ ರೈತರಿಗೆ ವಿಶೇಷ ಪ್ಯಾಕೇಜ್‌ ಘೋಷಣೆ ಮಾಡಿ ಸೌಲಭ್ಯ ಒದಗಿಸಬೇಕು ಎಂದು ಕೋರಿದ್ದಾರೆ.

ಜಿಲ್ಲಾ ಉಪಾಧ್ಯಕ್ಷ ಎಸ್‌.ಎಸ್‌. ಕಳ್ಳಿಮನಿ, ಬಸವರಾಜ ಹಾದಿ, ಅಮೀರಜಾನ್‌ ಬೇಪಾರಿ, ಮಹಾಂತೇಶ ಬೇವಿನಹಿಂಡಿ, ಜಗದೀಶ ಪಾಟೀಲ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next