Advertisement

ಅವಹೇಳನ ಹೇಳಿಕೆ ನೀಡಿದವರ ವಿರುದ್ದ ಕ್ರಮಕ್ಕೆ ಒತ್ತಾಯ

02:42 PM Jun 11, 2022 | Team Udayavani |

ರಾಯಚೂರು: ಪ್ರವಾದಿ ಮಹಮ್ಮದ್‌ ಅವರ ಕುರಿತು ಅವಹೇಳನಕಾರಿ ಹೇಳಿಕೆ ಖಂಡಿಸಿ ಸೋಶಿಯಲ್‌ ಡೆಮಾಕ್ರೆಟಿಕ್‌ ಪಾರ್ಟಿ ಆಫ್‌ ಇಂಡಿಯಾ (ಎಸ್‌ಡಿಪಿಐ) ನೇತೃತ್ವದಲ್ಲಿ ವಿವಿಧ ಸಂಘಟನೆಗಳ ಮುಖಂಡರು ಡಿಸಿ ಕಚೇರಿ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ಬಿಜೆಪಿ ನಾಯಕರು ದ್ವೇಷ ಭಾಷಣ ಮಾಡುತ್ತಿದ್ದರೂ ಸರ್ಕಾರ ಯಾವುದೇ ಕಾನೂನಾತ್ಮಕ ಕ್ರಮ ಕೈಗೊಂಡಿಲ್ಲ. ಪ್ರವಾದಿ ನಿಂದನೆ ಕುರಿತು ಅಂತಾರಾಷ್ಟ್ರೀಯ ಒತ್ತಡಕ್ಕೆ ಮಣಿದು ನುಪುರ್‌ ಶರ್ಮಾ ಹಾಗೂ ನವೀನ್‌ ಜಿಂದಾಲ್‌ರನ್ನು ಪಕ್ಷದಿಂದ ವಜಾ ಮಾಡಿ ಕಣ್ಣೊರೆಸುವ ತಂತ್ರ ಮಾಡಿದೆ. ಕೂಡಲೇ ಇಬ್ಬರನ್ನು ಬಂಧಿಸಬೇಕು. ದೇಶದ ಮಾನ ಹರಾಜು ಮಾಡುತ್ತಿರುವ ಸಂಘ ಪರಿವಾರದ ನಾಯಕರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಎಸ್‌ಡಿಪಿಐ ಜಿಲ್ಲಾಧ್ಯಕ್ಷ ತೌಸೀಫ್‌ ಅಹ್ಮದ್‌, ಕಾರ್ಯದರ್ಶಿ ಜಿಲಾನಿ ಪಾಷಾ, ಮತೀನ್‌ ಅನ್ಸಾರಿ, ಮಹ್ಮದ್‌ ಶಫೀ, ಬಷೀರ್‌ ಅಹ್ಮದ್‌, ಸದ್ದಾಂ ಖುರೇಷಿ, ಮಹೆಬೂಬ್‌, ಮಝಾರ್‌, ಶೇಖ್‌ ವಾಹೀದ್‌, ಸಿರಾಜ್‌ ಅಹಮದ್‌ ಜಾಫೀ, ಸಾದೀಖ್‌ ಖಾನ್‌ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next