Advertisement

ಸಮರ್ಪಕ ಪರಿವರ್ತಕ ಅಳವಡಿಕೆಗೆ ಒತ್ತಾಯ

01:25 PM Jul 09, 2019 | Team Udayavani |

ಮಾಗಡಿ: ರೈತರ ಪಂಪ್‌ ಸೆಟ್‌ಗಳಿಗೆ ಸಮರ್ಪಕವಾಗಿ ಪರಿವರ್ತಕ (ಟಿಸಿ) ಅಳವಡಿಸುವಂತೆ ಒತ್ತಾಯಿಸಿ ಬೆಸ್ಕಾಂ ಎಂಜಿನಿಯರ್‌ ಅವರಿಗೆ ತಾಲೂಕು ರೈತ ಸಂಘದ ಅಧ್ಯಕ್ಷ ಹೊಸಪಾಳ್ಯದ ಲೋಕೇಶ್‌ ಮನವಿ ಪತ್ರ ಸಲ್ಲಿಸಿದರು.

Advertisement

ಪಟ್ಟಣ ಬೆಸ್ಕಾಂ ಕಚೇರಿಗೆ ರೈತರೊಂದಿಗೆ ಭೇಟಿ ನೀಡಿದ ಲೋಕೇಶ್‌ ಅವರು, ತಾಲೂಕಿನಲ್ಲಿ ಮಳೆಯಿಲ್ಲ. ಬರಗಾಲ ಇರುವ ಪಂಪ್‌ಸೆಟ್ನಿಂದ ನೀರನ್ನು ತಮ್ಮ ಹೊಲಗದ್ದೆ ತೋಟಗಳಿಗೆ ಹಾಯಿಸಿಕೊಳ್ಳಲು ಕೂಡಲೇ ಪರಿವರ್ತಕ ಅಳವಡಿಸುವಂತೆ ಒತ್ತಾಯಿಸಿದರು. ಈ ಕುರಿತು ರೈತರ ಕುಂದು ಕೊರತೆ ಸಭೆ ಕರೆಯುವಂತೆ ಮನವಿ ಮಾಡಿದ್ದರೂ ಸಭೆ ನಡೆಸಿಲ್ಲ. ಸಭೆಗೂ ಬರುತ್ತಿಲ್ಲ ದಿನೇ ರೈತರ ನೀರಿನ ಸಮಸ್ಯೆ ಹೆಚ್ಚಾಗುತ್ತಿದೆ. ನೀರಿಗಾಗಿ ಆಹಾಕಾರ ಉಂಟಾಗುತ್ತಿದೆ ಎಂದು ಹೇಳಿದರು.

ಶೀಘ್ರದಲ್ಲಿಯೇ ಬೆಸ್ಕಾಂ ಎಂಜಿನಿಯರ್‌ಗಳು ರೈತರ ಪಂಪ್‌ ಸೆಟ್‌ಗಳಿಗೆ ಪರಿವರ್ತಕ ಅಳವಡಿಸದಿದ್ದರೆ ರೈತರೆಲ್ಲರೂ ಒಗ್ಗೂಡಿ ಬೆಸ್ಕಾಂಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ರೈತ ಸಂಘದ ಕಾರ್ಯದರ್ಶಿ ಮಧುಗೌಡ, ಜಯರಾಂ, ಶಿವಣ್ಣ ಇತರರು ಹಾಜರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next