Advertisement

ತಾರತಮ್ಯ ನಿವಾರಣೆಗೆ ಒತ್ತಾಯ

03:42 PM Dec 29, 2019 | Team Udayavani |

ಕುಮಟಾ: ಸಾರಿಗೆ ಸಂಸ್ಥೆ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕೆಂದು ಒತ್ತಾಯಿಸಿ, ಸಾರಿಗೆ ಇಲಾಖಾ ನೌಕರರ ಮೂಲಭೂತ ಹಕ್ಕುಗಳ ವಿಚಾರ

Advertisement

ವೇದಿಕೆ ಕುಮಟಾ ಘಟಕದ ವತಿಯಿಂದ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಭಟ್ಕಳದ ಮಂಕಿಯಲ್ಲಿ ಮನವಿ ಸಲ್ಲಿಸಲಾಯಿತು.  ಸಾರಿಗೆ ನಿಗಮದ ನೌಕರರು ಪ್ರಾಮಾಣಿಕವಾಗಿ ತಮ್ಮ ಜವಾಬ್ದಾರಿಗಳನ್ನು ನಿರ್ವಹಿಸುತ್ತಿದ್ದಾರೆ. ಶಿಕ್ಷಣ, ಹೆಸ್ಕಾಂ, ಗ್ರಾಮೀಣಾಭಿವೃದ್ಧಿ, ಕೃಷಿ, ನೀರಾವರಿ, ಸಮಾಜ ಕಲ್ಯಾಣ, ಪೌರಾಡಳಿತ ಇಲಾಖೆ ಸೇರಿದಂತೆ ಹಲವು ಇಲಾಖೆಗಳಂತೆಯೇ ರಾಜ್ಯದ ಜನತೆಗೆ ನೀಡುತ್ತಿರುವ ಸೇವೆಯಂತೆ ಸಾರಿಗೆ ಇಲಾಖೆ ನೌಕರರೂ ಪ್ರಾಮಾಣಿಕವಾಗಿ ಕರ್ತವ್ಯ ನಿಭಾಯಿಸುತ್ತಿದ್ದಾರೆ. ಸಾರಿಗೆ ನಿಗಮದ ನೌಕರರನ್ನು ಸರ್ಕಾರಿ ನೌಕರ, ಸರ್ಕಾರಿ ಪಿಂಚಣಿ, ವೇತನ ತಾರತಮ್ಯ ನಿವಾರಣೆ, ಅಂತರ್‌ ನಿಗಮಕ್ಕೆ ಸಿಬ್ಬಂದಿ ವರ್ಗಾವಣೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗಾಗಿ ಶೀಘ್ರದಲ್ಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next