Advertisement

ಮಾರುಕಟ್ಟೆ ನಿರ್ಮಾಣಕ್ಕೆ ಒತ್ತಾಯ

01:28 PM Nov 25, 2021 | Team Udayavani |

ನಾಗರಹಾಳ: ಸಮೀಪದ ಖೈರವಾಡಗಿ ಗ್ರಾಮದಲ್ಲಿ ತರಕಾರಿ ಮಾರುಕಟ್ಟೆ ಇಲ್ಲದೇ ಬಯಲಲ್ಲೇ ಸಂತೆ ಮಾಡಲಾಗುತ್ತಿದೆ. ಕೂಡಲೇ ಸಂತೆ ಮಾರುಕಟ್ಟೆ ನಿರ್ಮಾಣ ಮಾಡಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

Advertisement

ಈ ಖೈರವಾಡಗಿ ಗ್ರಾಮವು ಸುತ್ತಲಿನ ಹತ್ತಾರು ಗ್ರಾಮಗಳ ಕೇಂದ್ರ ಸ್ಥಾನವಾಗಿದ್ದು, ಗ್ರಾಮದಲ್ಲಿ ಪ್ರತಿ ಮಂಗಳವಾರ ತರಕಾರಿ ವ್ಯಾಪಾರ ನಡೆಯುತ್ತದೆ. ಆದರೆ, ತರಕಾರಿ ಮಾರುಕಟ್ಟೆ ಇಲ್ಲದೇ ವ್ಯಾಪಾರಿಗಳು ಮಳೆ, ಬಿಸಿಲು ಲೆಕ್ಕಿಸದೇ ಬೆಳಗ್ಗೆಯಿಂದ ಸಾಯಂಕಾಲದ ವರೆಗೆ ಬಿರುಬಿಸಿಲಿನಲ್ಲಿ ವ್ಯಾಪಾರ ಮಾಡುವಂತಾಗಿದೆ.

ಮಳೆಗಾಲದಲ್ಲಿ ಮಳೆ ಬಂದರೆ ಎಲ್ಲಾ ತರಕಾರಿಗಳು ತೊಯ್ದು ಹಾಳಾಗುತ್ತಿದೆ. ಇದರಿಂದ ವ್ಯಾಪಾರಕ್ಕೆ ತೊಂದರೆಯಾಗುತ್ತಿದೆ. ಈ ಕುರಿತು ಗ್ರಾಪಂ ಆಡಳಿತ ಮಂಡಳಿಗೆ ಹಾಗೂ ಜನಪ್ರತಿನಿಧಿಗಳ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ. ಇನ್ನಾದರೂ ಗ್ರಾಮದಲ್ಲಿ ತರಕಾರಿ ವ್ಯಾಪಾರಿಗಳಿಗೆ ಮಾರುಕಟ್ಟೆ ನಿರ್ಮಿಸಬೇಕೆಂದು ಸಾರ್ವಜನಿಕರು ಹಾಗೂ ವ್ಯಾಪಾರಿಗಳು ಒತ್ತಾಯಿಸಿದ್ದಾರೆ

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next