Advertisement

ರಸ್ತೆ-ಚರಂಡಿ ನಿರ್ಮಾಣಕ್ಕೆ ಒತ್ತಾಯ

01:41 PM Nov 09, 2019 | Team Udayavani |

ನರೇಗಲ್ಲ: ಸಮೀಪದ ಡ.ಸ. ಹಡಗಲಿ ಗ್ರಾಮಕ್ಕೆ ತಾ.ಪಂ ಇಒ ಸಂತೋಷಕುಮಾರ ಪಾಟೀಲ ಶುಕ್ರವಾರ ಭೇಟಿ ನೀಡಿ ಗ್ರಾಮದಲ್ಲಿರುವ ಸಮಸ್ಯೆಗಳನ್ನು ಆಲಿಸಿದರು.

Advertisement

ಈ ವೇಳೆ ಗ್ರಾಮಸ್ಥ ಯಲ್ಲಪ್ಪಗೌಡ ಹಿರೇಗೌಡ್ರ ಮಾತನಾಡಿ, ಗ್ರಾಮದ ಕೆಲ ಓಣಿಗಳಲ್ಲಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಜನರು ಪರದಾಡುವಂತಾಗಿದೆ. ಸುವ್ಯವಸ್ಥೆಯ  ಸಿಸಿ ರಸ್ತೆ ಹಾಗೂ ಚರಂಡಿಗಳು ಇಲ್ಲದೆ ಕೆಲ ಕಡೆಗಳಲ್ಲಿ ನೀರು ಸರಾಗವಾಗಿ ಹರಿಯದೇ ನಿಂತಲ್ಲೇ ನಿಂತು ವಾಸನೆ ಬಡಿಯುತ್ತಿದೆ. ಕೆಲ ಕಡೆಗಳಲ್ಲಿ ಚರಂಡಿಗಳೇ ಇಲ್ಲ. ಯಾವುದೇ ಮೂಲ ಸೌಲಭ್ಯ ಇಲ್ಲವಾಗಿದೆ. ಇದರಿಂದ ಸಾರ್ವಜನಿಕರು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ವಾಸ ಮಾಡುತ್ತಿದ್ದಾರೆ. ಕೂಡಲೇ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಿಸಬೇಕೆಂದು ಈ ಹಿಂದೆ ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮನವಿ ಸಲ್ಲಿಸಲಾಗಿತ್ತು ಎಂದರು.

ತಾಪಂ ಇಒ ಸಂತೋಷಕುಮಾರ ಪಾಟೀಲ ಮಾತನಾಡಿ, ಗ್ರಾಮದಲ್ಲಿ ಈಗಾಗಲೇ ಗ್ರಾಮ ವಿಕಾಸ ಯೋಜನೆಯಡಿಯಲ್ಲಿ 75 ಲಕ್ಷ ರೂ. ಗಳಲ್ಲಿ ಅನೇಕ ಕಾಮಗಾರಿ ಮಾಡಲಾಗಿದೆ. ಗ್ರಾಮದಲ್ಲಿ ಒಟ್ಟು 7 ಕಡೆಗಳಲ್ಲಿ ಸಿಸಿ ರಸ್ತೆ ಹಾಗೂ ಚರಂಡಿಗಳ ಕಾಮಗಾರಿ ಉಳಿದಿದ್ದು, ಈ ಕಾಮಗಾರಿಗಳನ್ನು 14ನೇ ಹಣಕಾಸು ಅಥವಾ ಎನ್‌ಆರ್‌ಜಿ ಯೋಜನೆಯಡಿಯಲ್ಲಿ ಕಾಮಾಗಾರಿ ಮಾಡಬೇಕೆಂದು ಗ್ರಾಪಂ ಅಧಿಕಾರಿಗಳಿಗೆ ಸೂಚಿಸಿದರು. ಪಿಡಿಒ ಸುನೀಲ, ರುದ್ರಯ್ಯ ಹಿರೇಮಠ, ಶರಣಪ್ಪ ಕುರಿ, ವೀರಯ್ಯ ಶಿರಹಟ್ಟಿಮಠ, ಚನ್ನಪ್ಪ ಹೂಗಾರ, ರಾಮಪ್ಪ ನಾಯ್ಕರ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next