Advertisement

ರಾಸಾಯನಿಕ ಮಿಶ್ರಿತ ತಂಪು ಪಾನೀಯ ಮಾರಾಟಕ್ಕೆ ಕಡಿವಾಣ ಹಾಕಲು ಒತ್ತಾಯ

02:59 PM Apr 27, 2022 | Team Udayavani |

ಲಿಂಗಸುಗೂರು: ಪಟ್ಟಣದಲ್ಲಿ ರಾಸಾಯನಿಕ ಮಿಶ್ರಿತ ತಂಪು ಪಾನೀಯ ಮಾರಾಟ ಮಾಡುತ್ತಿದ್ದು, ಇವುಗಳನ್ನು ತಡೆಗಟ್ಟುವಂತೆ ಆಗ್ರಹಿಸಿ ಕರವೇ ಮುಖಂಡರು ಮಂಗಳವಾರ ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.

Advertisement

ಪಟ್ಟಣದ ರಸ್ತೆ ಬದಿಯಲ್ಲಿ ಕಡಿಮೆ ದರದಲ್ಲಿ ವಿವಿಧ ತಂಪು ಪಾನೀಯ ಮಾರಾಟ ಮಾಡಲಾಗುತ್ತಿದೆ. ಆದರೆ ಈ ತಂಪು ಪಾನೀಯಗಳಲ್ಲಿ ರಾಸಾಯನಿಕ ಮಿಶ್ರಿತ ಮಾಡುತ್ತಿದ್ದರಿಂದ ಆರೋಗ್ಯದ ದುಷ್ಪರಿಣಾಮ ಬೀರುತ್ತಿವೆ. ಕಡಿಮೆ ದರದಲ್ಲಿ ಮಾರಾಟ ಮಾಡುತ್ತಿದ್ದರಿಂದ ಸಾರ್ವಜನಿಕರು ಮುಗಿಬಿದ್ದು ತಂಪು ಪಾನೀಯ ಕುಡಿಯುತ್ತಾರೆ. ಇಂತಹ ತಂಪು ಪಾನೀಯಗಳು ನಾಯಿ ಕೊಡೆಗಳಂತೆ ತಲೆ ಎತ್ತಿ ನಿಂತಿವೆ. ಕೂಡಲೇ ಇದಕ್ಕೆ ಕಡಿವಾಣ ಹಾಕುವಂತೆ ಆಗ್ರಹಿಸಿದರು.

ಕರವೇ ಅಧ್ಯಕ್ಷ ಆಂಜನೇಯ ಭಂಡಾರಿ, ಆದಪ್ಪ ಯಲಗಲದಿನ್ನಿ, ಮಲ್ಲಪ್ಪ, ಸಿದ್ದಪ್ಪ ಹಿರೇಮನಿ ಭೀಮೇಶ ನಾಯಕ, ಮೌನೇಶ ಬುಳ್ಳಾಪುರ, ರವಿಕುಮಾರ , ಹಾಗೂ ಇನ್ನಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next