Advertisement

ಗುಡೂರು-ಜೋಳದೆಡಗಿ ಬಾಂದಾರ ಸೇತುವೆ ಕಾಮಗಾರಿ ಪರಿಶೀಲನೆ

06:36 PM Sep 26, 2020 | Suhan S |

ಸೈದಾಪುರ: ಗುಡೂರು-ಜೋಳದೆಡಗಿ ಬ್ರಿಜ್‌ ಕಂ ಬ್ಯಾರೇಜ್‌ಗೆ ಜಿಪಂ ಅಧ್ಯಕ್ಷ ಬಸನಗೌಡ ಪಾಟೀಲ ಯಡಿಯಾಪುರ ಭೇಟಿ ನೀಡಿ ಅಲ್ಲಿನ ಕಾಮಗಾರಿ ವೀಕ್ಷಿಸಿದರು. 18 ತಿಂಗಳಲ್ಲಿ ಮುಗಿಯಬೇಕಾದ ಕಾಮಗಾರಿ ನಿಧಾನಗತಿಯಲ್ಲಿ ಸಾಗಿದ್ದು, ಕೂಡಲೇ ಕಾಮಗಾರಿ ಚುರುಕುಗೊಳಿಸುವಂತೆ ಸೂಚಿಸಿದರು.

Advertisement

ಕಳೆದ ಬಾರಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಗೇಟ್‌ಗಳು ತೆಗೆಯದಂತಾಗಿ ನೀರು ಸರಬರಾಜು ಆಗದೆ ನದಿ ನೀರಿನ ಪ್ರಮಾಣ ಹೆಚ್ಚಾಗಿ ರಸ್ತೆ ಕೊಚ್ಚಿಕೊಂಡು ಹೋಗಿತ್ತು. ಇದರ ನಿವಾರಣೆಗಾಗಿ ಎತ್ತರ ಹೆಚ್ಚಿಸಿಕೊಂಡು ಪರ್ಯಾಯ ವ್ಯವಸ್ಥೆಯೊಂದಿಗೆ ಸೇತುವೆ ಪಕ್ಕದಲ್ಲಿ ಬಾಂದಾರ ನಿರ್ಮಿಸುತ್ತಿದ್ದು, ಗುಣಮಟ್ಟ ಕಾಯ್ದುಕೊಳ್ಳುವಂತೆ ಸೂಚಿಸಿದರು. ವಡಗೇರಾ ಹಾಗೂ ಯಾದಗಿರಿ ತಾಲೂಕುಗಳ ಗಡಿ ಭಾಗಗಳ ಜನರಿಗೆ ಸುಲಭ ಸಂಪರ್ಕದ ಮಾರ್ಗ ಇದಾಗಿದ್ದು, ಇದಕ್ಕೆ ಹೆಚ್ಚಿನ ಮಹತ್ವ ನೀಡಬೇಕಾಗಿದೆ ಎಂದರು.

ಸೇತುವೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾದ ಕೊಂಡಾಪುರ ಹೊರವಲಯದಲ್ಲಿನ ಹಳ್ಳ ತುಂಬಿ ಹರಿದರೆ ಸೇತುವೆ ರಸ್ತೆ ಮೇಲೆ ನೀರು ಹರಿಯುವ ಬಗ್ಗೆ ಮಾಹಿತಿ ಪಡೆದು ಇದನ್ನು ಸರಿಪಡಿಸುವುದಾಗಿ ಭರವಸೆ ನೀಡಿದರು. ರಾಮಸಮುಂದ್ರ ಜಿಪಂ ಸದಸ್ಯ ಅಮರದೀಪ, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮಣ್ಣಗೌಡ ಪಾಟೀಲ ಕ್ಯಾತನಾಳ, ಜಿಪಂ ಉಪ ಕಾರ್ಯನಿರ್ವಾಹಕ ಅಧಿಕಾರಿ ಬಸವಣ್ಣಪ್ಪ ಬೋಸ್ಕೆ, ವಿಠಲ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next