Advertisement

ಇಲಾಖೆಯಲ್ಲಿ ಅಕ್ರಮ ನಡೆದರೆ ಪರಿಶೀಲನೆ

11:07 AM Sep 11, 2019 | Team Udayavani |

ಕೊಪ್ಪಳ: ಸಣ್ಣ ನೀರಾವರಿ ಇಲಾಖೆಯಲ್ಲಿ ಅಕ್ರಮ ನಡೆದ ಬಗ್ಗೆ ತನಿಖೆ ನಡೆದಿದೆ. ಈಗಷ್ಟೆ ನಾನು ಅಧಿಕಾರ ವಹಿಸಿಕೊಂಡಿದ್ದೇನೆ. ಇಲಾಖೆಯಲ್ಲಿ ಏನೇನಾಗಿದೆ ಎಂದು ಪರಿಶೀಲನೆ ಮಾಡಬೇಕಿದೆ. ಅಕ್ರಮದ ತನಿಖೆ ಸಿಬಿಐಗೆ ಕೊಡಬೇಕೆಂದರೆ ವಿವಿಧ ಇಲಾಖೆಗಳ ಅಭಿಪ್ರಾಯ ಪಡೆಯಬೇಕು ಎಂದು ಕಾನೂನು, ಸಂಸದೀಯ ಹಾಗೂ ಸಣ್ಣ ನೀರಾವರಿ ಇಲಾಖೆ ಸಚಿವ ಮಾಧುಸ್ವಾಮಿ ಅವರು ಹೇಳಿದರು.

Advertisement

ತಾಲೂಕಿನ ಕೋಳೂರು ಸಮೀಪದ ಸೇತುವೆಯಲ್ಲಿ ನೀರು ಸಂಗ್ರಹಣೆ ಪರಿಶೀಲನೆ ಮಾಡಿ ಅವರು ಸುದ್ದಿಗಾರರ ಜೊತೆ ಮಾತನಾಡಿದರು. ಈ ಹಿಂದೆ ಸಣ್ಣ ನೀರಾವರಿ ಇಲಾಖೆ ಸಚಿವರಾಗಿದ್ದ ಶಿವರಾಜ ತಂಗಡಗಿ ಅವರು ಅಕ್ರಮದಲ್ಲಿ ತೊಡಗಿದ್ದಾರೆ. ಕೋಟ್ಯಂತರ ರೂ. ಲೂಟಿಯ ಕುರಿತು ತನಿಖೆ ನಡೆಯುತ್ತಿದೆ. ಈ ಬಗ್ಗೆ ವಿವಿಧ ಇಲಾಖೆಗಳ ಅಭಿಪ್ರಾಯ ಪಡೆಯದೇ ಸಿಬಿಐಗೆ ಕೊಡಲು ಬರುವುದಿಲ್ಲ. ಎಲ್ಲವನ್ನು ವಿಚಾರಣೆ ಮಾಡಬೇಕು ಎಂದರು.

ಇನ್ನೂ ಜಿಲ್ಲೆಯಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು ಸರಿಯಾಗಿ ಕಾರ್ಯ ನಿರ್ವಹಿಸಿಲ್ಲ. ಸಭೆಗೆ ಹಾಜರಾಗುತ್ತಿಲ್ಲ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇನ್ಮೇಲೆ ಯಾವುದೇ ಅಧಿಕಾರಿ ಸಭೆಗೆ ಹಾಜರಾಗದಿದ್ದರೆ, ಸಮರ್ಪಕ ಮಾಹಿತಿ ನೀಡದಿದ್ದರೆ ಡಿಸಿ ನಮಗೆ ಅಂತಹ ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳುವಂತೆ ವರದಿ ಮಾಡಿದರೆ ಮುಲಾಜಿಲ್ಲದೆ ಶಿಸ್ತು ಕ್ರಮ ಕೈಗೊಳ್ಳಲಿದ್ದೇವೆ ಎಂದರು.

ಈ ವೇಳೆ ಸಂಸದ ಸಂಗಣ್ಣ ಕರಡಿ, ಶಾಸಕರಾದ ಹಾಲಪ್ಪ ಆಚಾರ್‌, ಪರಣ್ಣ ಮುನವಳ್ಳಿ, ಕಾಂಗ್ರೆಸ್‌ ಶಾಸಕ ರಾಘವೇಂದ್ರ ಹಿಟ್ನಾಳ ಸೇರಿದಂತೆ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next