Advertisement

ಕೆರೆ ಹೂಳೆತ್ತುವ ಕಾಮಗಾರಿ ಪರಿಶೀಲನೆ

06:39 PM May 14, 2020 | Suhan S |

ಯಾದಗಿರಿ: ತಾಲೂಕಿನ ಅಲ್ಲಿಪುರ ಕೆರೆಯಲ್ಲಿ ಖಾತ್ರಿ ಯೋಜನೆಯಡಿ ಕೈಗೊಂಡ ಕೆರೆ ಹೂಳೆತ್ತುವ ಕಾಮಗಾರಿಯನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಎ.ಬಿ.ಇಬ್ರಾಹಿಂ ಸೋಮವಾರ ಪರಿಶೀಲಿಸಿದರು.

Advertisement

ಕೂಲಿಕಾರರೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಕೂಲಿಕಾರರಿಗೆ ಸಿಗುವ ಕೂಲಿ, ಎಷ್ಟು ದಿನಗಳಿಂದ ಕೆಲಸ ಮಾಡುತ್ತಿದ್ದಾರೆ. ಕೆಲಸಕ್ಕೆ ಯಾರು ಕರೆದುಕೊಂಡು ಬರುತ್ತಿದ್ದಾರೆ ಎನ್ನುವ ಮಾಹಿತಿ ಪಡೆದರು.

ಜಿಪಂ ಸಿಇಒ ಶಿಲ್ಪಾ ಶರ್ಮಾ ಮಾತನಾಡಿ, ಕೆರೆಯ ಹೂಳೆತ್ತುವ ಕಾಮಗಾರಿಯಲ್ಲಿ 115 ಜನ ಕೂಲಿಕಾರರು ಕೆಲಸ ಮಾಡುತ್ತಿದ್ದು, ಕಾಮಗಾರಿ ಸ್ಥಳದಲ್ಲಿ ನೆರಳು, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, ಕೂಲಿಕಾರರಿಗೆ ಗ್ರಾಪಂ ವತಿಯಿಂದ ಮಾಸ್ಕ್ ವಿತರಿಸಿ, ಸ್ಯಾನಿಟೈಸರ್‌ ಸಿಂಪಡಿಸಲಾಗಿದೆ. ಕೋವಿಡ್‌-19 ಸಂಬಂಧ ಕೂಲಿಕಾರರಿಗೆ

ನರೇಗಾ ಯೋಜನೆಯಡಿ ಕೆಲಸ ನೀಡುವ ಮುಂಚೆ ತೆಗೆದುಕೊಂಡ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ವಿವರಿಸಿದರು. ಇಒ ಬಸವರಾಜ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next