Advertisement

ಗಣೇಶ ಪ್ರತಿಷ್ಠಾಪನೆಯೊಂದಿಗೆ ಭಾವೈಕ್ಯತೆ ಮೆರೆದ ಇನ್ಸ್‌ಪೆಕ್ಟರ್‌ ಜಾಕೀರ ಪಾಷಾ

01:40 PM Sep 12, 2021 | Team Udayavani |

ಹುಬ್ಬಳ್ಳಿ: ಗೋಕುಲ ರಸ್ತೆ ಪೊಲೀಸ್‌ ಠಾಣೆ ಇನ್ಸ್‌ಪೆಕ್ಟರ್‌ ಜಾಕೀರ ಪಾಷಾ ಕಾಲಿಮಿರ್ಚಿ ಅವರು ಸ್ವತಃ ಗಣೇಶ ವಿಗ್ರಹ ಪ್ರತಿಷ್ಠಾಪನೆ ಮಾಡುವ ಮೂಲಕ ಭಾವೈಕ್ಯತೆ ಸಾರಿದರು.

Advertisement

ಕಾಲಿಮಿರ್ಚಿ ಅವರು ಬಿಳಿ ಅಂಗಿ, ಪಂಚೆ ಉಟ್ಟು, ಹಣೆಗೆ ತಿಲಕವಿಟ್ಟುಕೊಂಡು ಗಣೇಶನನ್ನು ಠಾಣೆಗೆ ತೆಗೆದುಕೊಂಡು ಬಂದು ಪ್ರತಿಷ್ಠಾಪಿಸಿದರು. ನಂತರ ತೆಂಗಿನಕಾಯಿಯಲ್ಲಿ ಕರ್ಪೂರದ ದೀಪ ಬೆಳಗಿ ವಿಘ್ನನಿವಾರಕನ ಆಶೀರ್ವಾದ ಪಡೆದರು.

ಜಾತಿ-ಧರ್ಮಗಳ ನಡುವೆ ಕಂದಕ ಸೃಷ್ಟಿಯಾಗುತ್ತಿರುವ ಇಂದಿನ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್‌ ಕಾಲಿಮಿರ್ಚಿ ಭಾವೈಕ್ಯತೆಗೆ ಮುನ್ನುಡಿ ಬರೆದಿದ್ದು, ಇತರರಿಗೆ ಮಾದರಿಯಾಗಿದ್ದಾರೆ. ಠಾಣೆಯ ಅಧಿಕಾರಿಯ ಈ ಕಾರ್ಯಕ್ಕೆ ಸಿಬ್ಬಂದಿಯೆಲ್ಲ ಹರ್ಷ ವ್ಯಕ್ತಪಡಿಸಿ ಕೃತಜ್ಞತೆ ಸಲ್ಲಿಸಿದ್ದಾರೆ.

ಪ್ರತಿ ವರ್ಷ ಹು-ಧಾ ಪೊಲೀಸ್‌ ಕಮಿಷನರೇಟ್‌ನ ಠಾಣೆಗಳಲ್ಲಿ ಗಣೇಶ ವಿಗ್ರಹವನ್ನು ಐದು ದಿನ ಪ್ರತಿಷ್ಠಾಪಿಸಿ ಸಾರ್ವಜನಿಕರಿಗೆ ಪ್ರಸಾದ, ಅನ್ನಸಂತರ್ಪಣೆ ಮಾಡಲಾಗುತ್ತಿತ್ತು. ಆದರೆ ಈ ವರ್ಷ ಕೋವಿಡ್‌-19 ಹಿನ್ನೆಲೆಯಲ್ಲಿ ಒಂದೇ ದಿನ ಪ್ರತಿಷ್ಠಾಪಿಸಿ ವಿಸರ್ಜನೆ ಮಾಡಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next