Advertisement

Chandigarh: ಆಪ್‌ಗೆ ದೊಡ್ಡ ಹೊಡೆತ… ಆಪ್ ನ 3 ಕೌನ್ಸಿಲರ್‌ಗಳು ಬಿಜೆಪಿಗೆ ಸೇರ್ಪಡೆ

09:00 AM Feb 19, 2024 | Team Udayavani |

ಚಂಡೀಗಢ: ಆಮ್ ಆದ್ಮಿ ಪಕ್ಷದ ಮೂವರು ಕೌನ್ಸಿಲರ್‌ಗಳು ಚಂಡೀಗಢ ಪೂನಂ ದೇವಿ, ನೇಹಾ ಮುಸಾವತ್ ಮತ್ತು ಗುರ್ಚರಣ್ ಕಲಾ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

Advertisement

ಮೂವರು ಕೌನ್ಸಿಲರ್‌ಗಳು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರನ್ನು ಭೇಟಿಯಾದರು. ವಿನೋದ್ ತಾವ್ಡೆ ಚಂಡೀಗಢ ಮೇಯರ್ ಚುನಾವಣೆಯ ಉಸ್ತುವಾರಿಯೂ ಆಗಿದ್ದಾರೆ. ಇದರೊಂದಿಗೆ ಮೇಯರ್ ಚುನಾವಣೆಯಲ್ಲಿ ಅಕ್ರಮ ನಡೆದ ಪ್ರಕರಣದ ವಿಚಾರಣೆಗೂ ಮುನ್ನವೇ ಆಪ್ ಗೆ ದೊಡ್ಡ ಹೊಡೆತ ಬಿದ್ದಂತಾಗಿದೆ.

ಚಂಡೀಗಢದಲ್ಲಿ ಆಮ್ ಆದ್ಮಿ ಪಕ್ಷ ಮತ್ತು ಕಾಂಗ್ರೆಸ್‌ನ ಇನ್ನೂ ಕೆಲವು ಕೌನ್ಸಿಲರ್‌ಗಳು ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದು ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಂದಿ ಬಿಜೆಪಿ ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಆಮ್ ಆದ್ಮಿ ಪಕ್ಷ ಸುಳ್ಳು ಭರವಸೆಗಳನ್ನು ನೀಡುತ್ತಿದೆ ನೇಹಾ ಮುಸಾವತ್ ಆರೋಪ :
ಬಿಜೆಪಿ ಸೇರಿದ ನೇಹಾ ಮುಸಾವತ್ ಮಾತನಾಡಿ ‘ಆಮ್ ಆದ್ಮಿ ಪಕ್ಷ ನನ್ನನ್ನು ಮೇಯರ್ ಅಭ್ಯರ್ಥಿಯನ್ನಾಗಿ ಮಾಡಿದೆ ಎಂದು ಸುಳ್ಳು ಭರವಸೆ ನೀಡಿದೆ. ಮೇಯರ್ ಹುದ್ದೆಗೆ ನನ್ನನ್ನು ಅತ್ಯಂತ ವಿದ್ಯಾವಂತ ಅಭ್ಯರ್ಥಿ ಎಂದು ಪರಿಗಣಿಸಲಾಗಿತ್ತು, ಆದರೆ ಸಮಯ ಬಂದಾಗ ಬೇರೆಯವರನ್ನು ಅಭ್ಯರ್ಥಿ ಎಂದು ಘೋಷಿಸಿ ಸುಳ್ಳು ಭರವಸೆ ನೀಡುವ ಮೂಲಕ ಅನ್ಯಾಯ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ. ಬಡವರು, ದಲಿತರ ಕಲ್ಯಾಣಕ್ಕಾಗಿ ಪ್ರಧಾನಿ ಮೋದಿ ಅವರು ಮಾಡಿರುವ ಕೆಲಸಗಳಿಂದ ಪ್ರಭಾವಿತನಾಗಿದ್ದೇನೆ ಅದೇ ಕಾರಣದಿಂದ ಇಂದು ಬಿಜೆಪಿ ಸೇರುತ್ತಿದ್ದೇನೆ ಎಂದು ಹೇಳಿದ್ದಾರೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿನೋದ್ ತಾವ್ಡೆ ಅವರು ಚಂಡೀಗಢ ಕೌನ್ಸಿಲರ್‌ಗಳಾದ ಪೂನಂ ದೇವಿ, ನೇಹಾ ಮುಸಾವತ್, ಗುರ್ಚರಣ್ ಕಲಾ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ ಬಿಜೆಪಿ ಅವರನ್ನು ಗೌರವಿಸುತ್ತದೆ ಎಂದು ಹೇಳಿದ್ದಾರೆ.

Advertisement

ಇದನ್ನೂ ಓದಿ: Court ವಿಚಾರಣೆಗೂ ಮೊದಲೇ ಚಂಡೀಗಢ ಮೇಯರ್ ಸ್ಥಾನಕ್ಕೆ ಬಿಜೆಪಿಯ ಮನೋಜ್ ಸೋಂಕರ್ ರಾಜೀನಾಮೆ

Advertisement

Udayavani is now on Telegram. Click here to join our channel and stay updated with the latest news.

Next