Advertisement

ರಾಹುಲ್ ಭಾಷಣದ ಎಫೆಕ್ಟ್; ಗೋವಾ ಕಾಂಗ್ರೆಸ್ ಅಧ್ಯಕ್ಷ ನಾಯಕ್ ರಾಜೀನಾಮೆ

06:34 PM Mar 20, 2018 | Sharanya Alva |

ನವದೆಹಲಿ: ಪಕ್ಷದಲ್ಲಿರುವ ಹಿರಿಯ ಮುಖಂಡರು ಯುವಪೀಳಿಗೆಗೆ ಅವಕಾಶ ಮಾಡಿಕೊಡಬೇಕು ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಇತ್ತೀಚೆಗೆ ನವದೆಹಲಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ 84ನೇ ಪೂರ್ಣಾಧಿವೇಶನದಲ್ಲಿ ಕರೆ ಕೊಟ್ಟ ಭಾಷಣದಿಂದ ಪ್ರೇರಿತರಾದ ಗೋವಾ ಕಾಂಗ್ರೆಸ್ ಅಧ್ಯಕ್ಷ ಶಾಂತರಾಮ್ ನಾಯಕ್ (72) ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.

Advertisement

ಯುವಪೀಳಿಗೆ ನಾಯಕತ್ವ ವಹಿಸಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿಯವರ ಭಾಷಣದಿಂದ ಪ್ರೇರಿತನಾಗಿ ಗೋವಾ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ನಾಯಕ್ ತಿಳಿಸಿದ್ದಾರೆ.

ನಾವು ಪಕ್ಷವನ್ನು ಬಲಿಷ್ಠಗೊಳಿಸಬೇಕಿದ್ದರೆ ಕಾರ್ಯಕರ್ತರು ಮತ್ತು ನಾಯಕರ ನಡುವಿನ ಗೋಡೆಯನ್ನು ಕಿತ್ತು ಹಾಕಬೇಕಾದ ಮೊದಲ ಕೆಲಸವಾಗಿದೆ ಎಂದು ರಾಹುಲ್ ಅಭಿಪ್ರಾಯವ್ಯಕ್ತಪಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next