Advertisement

ಯಶ್, ರಿಷಬ್ ಭೇಟಿ : ಕಾಂತಾರ ಚಿತ್ರಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಪ್ರಧಾನಿ ಮೋದಿ

03:07 PM Feb 13, 2023 | Team Udayavani |

ಬೆಂಗಳೂರು : ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ ಉದ್ಘಾಟನೆಗೆ ಬೆಂಗಳೂರಿಗೆ ಆಗಮಿಸಿದ್ದ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾತ್ರಿ (ಫೆ 12) ಬೆಂಗಳೂರಿನ ರಾಜಭವನದಲ್ಲಿ ತಂಗಿದ್ದ ವೇಳೆ ದಿಗ್ಗಜ ನಟರು, ನಿರ್ಮಾಪಕರು ಕ್ರಿಕೆಟ್ ರಂಗದ ತಾರೆಗಳನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ವಿಶೇಷವಾಗಿ ಕಾಂತಾರ ಚಿತ್ರದ ನಟ , ನಿರ್ದೇಶಕ ರಿಷಬ್ ಶೆಟ್ಟಿ, ನಿರ್ಮಾಪಕ ವಿಜಯ್ ಕಿರಗಂದೂರು, ರಾಕಿಂಗ್ ಸ್ಟಾರ್ ಯಶ್, ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರನ್ನು ಔತಣ ಕೂಟಕ್ಕೆ ಆಹ್ವಾನಿಸಿದ್ದರು.

Advertisement

”ಸ್ಫೂರ್ತಿದಾಯಕ ಭೇಟಿ ಪ್ರಧಾನಿ ನರೇಂದ್ರ ಮೋದಿ ಅವರು ನವ ಭಾರತ ಮತ್ತು ಪ್ರಗತಿಪರ ಕರ್ನಾಟಕವನ್ನು ರೂಪಿಸುವಲ್ಲಿ ಮನರಂಜನಾ ಉದ್ಯಮದ ಪಾತ್ರವನ್ನು ನಾವು ಚರ್ಚಿಸಿದ್ದೇವೆ. (#BuildingABetterIndia)ಉತ್ತಮ ಭಾರತ ನಿರ್ಮಾಣಕ್ಕೆ ಕೊಡುಗೆ ನೀಡಲು ಹೆಮ್ಮೆ ಪಡುತ್ತೇನೆ. ನಿಮ್ಮ ದೂರದೃಷ್ಟಿಯ ನಾಯಕತ್ವವು ನಮಗೆ ಸ್ಫೂರ್ತಿ ನೀಡುತ್ತದೆ ಮತ್ತು ನಿಮ್ಮ ಪ್ರೋತ್ಸಾಹ ಜಗತ್ತೇ ನಮ್ಮೊಂದಿಗೆ ಇದ್ದ ಹಾಗೆ” ಎಂದು ಹೊಂಬಾಳೆ ಫಿಲ್ಮ್ಸ್ ಪರ ನಿರ್ಮಾಪಕ ವಿಜಯ್ ಕಿರಗಂದೂರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ : ಕುಂಬ್ಳೆ,ಶ್ರೀನಾಥ್ ಸೇರಿ ಕ್ರಿಕೆಟಿಗರ ಭೇಟಿಯಾದ ಪ್ರಧಾನಿ; ವಿವಿಧ ವಿಷಯಗಳ ಕುರಿತು ಚರ್ಚೆ

ಪ್ರಧಾನಿ ಮೋದಿ ಅವರು ಕನ್ನಡ ಚಲನಚಿತ್ರ ರಂಗದದ ನಾಯಕರನ್ನು ಭೇಟಿ ಮಾಡಿ ಸಾಂಸ್ಕೃತಿಕ ಸನ್ನಿವೇಶ ಮತ್ತು ನವ ಭಾರತ ಮತ್ತು ಪ್ರಗತಿಪರ ಕರ್ನಾಟಕ ನಿರ್ಮಾಣಕ್ಕೆ ಅವರು ನೀಡಬಹುದಾದ ಕೊಡುಗೆಯ ಕುರಿತು ಚರ್ಚಿಸಿದರು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಟ್ವೀಟ್ ಮಾಡಿದ್ದಾರೆ.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next