Advertisement

78 ಕಾಮಗಾರಿಗಳಿಗೆ ಸಿಎಂ ಶಂಕು ಸ್ಥಾಪನೆ

02:27 PM Mar 19, 2022 | Team Udayavani |

ಯಾದಗಿರಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶನಿವಾರ ಸುರಪುರ ತಾಲೂಕಿನ ದೇವತ್ಕಲ್‌ ಗ್ರಾಮದಲ್ಲಿ 1024 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಳ್ಳಲಾಗುವ 78 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಜೊತೆಗೆ 36 ಕೋಟಿ ರೂ. ವೆಚ್ಚದಲ್ಲಿ ಕೈಗೆತ್ತಿಕೊಂಡಿರುವ 24 ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ| ರಾಗಪ್ರಿಯಾ ಆರ್‌. ತಿಳಿಸಿದರು.

Advertisement

ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಜೊತೆಗೆ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಂದಾಯ ಸಚಿವ ಆರ್‌. ಅಶೋಕ ಇರಲಿದ್ದಾರೆ. ಬೆಂಗಳೂರಿನಿಂದ ಬೆಳಗ್ಗೆ ಹೆಲಿಕಾಪ್ಟರ್‌ ಮೂಲಕ ಹೊರಟ ಸಿಎಂ ಹಾಗೂ ಸಚಿವರು, ತೋರಣಗಲ್‌ನಲ್ಲಿ ಕೆಲ ಕಾಲ ತಂಗಿದ್ದು, ನಂತರ ಬೆಳಗ್ಗೆ 11.30ಕ್ಕೆ ದೇವತ್ಕಲ್‌ ಗ್ರಾಮಕ್ಕೆ ಆಗಮಿಸಿ ಶಂಕುಸ್ಥಾಪನೆ ನೆರವೇರಿಸಿ, ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ ಎಂದು ವಿವರಿಸಿದರು.

ನಂತರ ಹೆಲಿಕಾಪ್ಟರ್‌ ಮೂಲಕ ದೋರನಹಳ್ಳಿ ಗ್ರಾಮಕ್ಕೆ ಆಗಮಿಸಿ ಇತ್ತೀಚೆಗೆ ಸಿಲಿಂಡರ್‌ ಸೊ#ಧೀಟದಿಂದ ಮೃತಪಟ್ಟ 15 ಜನರಿಗೆ ತಲಾ 5 ಲಕ್ಷ ರೂ. ಪರಿಹಾರ ಚೆಕ್‌ ನ್ನು ಅವರ ಕುಟುಂಬ ವರ್ಗದವರಿಗೆ ವಿತರಿಸಲಿದ್ದಾರೆ. ಆನಂತರ ದೋರನಹಳ್ಳಿಯಿಂದ ಹೆಲಿಕಾಪ್ಟರ್‌ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಕಂದಾಯ ಸಚಿವರ ಗ್ರಾಮ ವಾಸ್ತವ್ಯ

ಸಿಎಂ ನಿರ್ಗಮನದ ನಂತರ ಕಂದಾಯ ಸಚಿವ ಆರ್‌. ಅಶೋಕ ಒಟ್ಟು 738.95 ಲಕ್ಷ ರೂ. ವೆಚ್ಚದ ವಿವಿಧ ಕಾಮಗಾರಿಗಳಿಗೆ ಶಂಕುಸ್ಥಾಪನೆ ಜೊತೆಗೆ ಇತರೆ ಕಾಮಗಾರಿಗಳ ಉದ್ಘಾಟನೆ ನೆರವೇರಿಸಲಿದ್ದಾರೆ. ಕಂದಾಯ ಸಚಿವರು ಶನಿವಾರ ದೇವತ್ಕಲ್‌ ಗ್ರಾಮದಲ್ಲಿ ವಾಸ್ತವ್ಯ ಮಾಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಲಿದ್ದು, ರವಿವಾರ ಬೆಳಗ್ಗೆ 11.30ಕ್ಕೆ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

Advertisement

ಕಂದಾಯ ಇಲಾಖೆ 13, ಅಂಬೇಡ್ಕರ್‌ ನಿಗಮ 6, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ 2, ವಿಕಲಚೇತನ ಹಾಗೂ ಹಿರಿಯ ನಾಗರಿಕ ಸಬಲೀಕರಣ 6, ಕೃಷಿ ಇಲಾಖೆ 5, ಪಶು ಸಂಗೋಪನಾ ಇಲಾಖೆ 2, ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ 6 ಫಲಾನುಭವಿಗಳಿಗೆ ಸೌಲಭ್ಯ ವಿತರಿಸಲಾಗುವುದು ಎಂದು ತಿಳಿಸಿದರು.

ನಂತರ ಮಧ್ಯಾಹ್ನ 2.20ಕ್ಕೆ ಹೆಲಿಕಾಪ್ಟರ್‌ ಮೂಲಕ ದೇವತ್ಕಲ್‌ ಗ್ರಾಮದಿಂದ ನಿರ್ಗಮಿಸಿ ಮಧ್ಯಾಹ್ನ 3 ಗಂಟೆಗೆ ಶಹಾಪುರ ತಾಲೂಕಿನ ದೋರನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಸಿಲಿಂಡರ್‌ ಸ್ಫೋಟದಿಂದ ಮೃತಪಟ್ಟವರ ವಾರಸುದಾರ ಪ್ರತಿ ಸದಸ್ಯರಿಗೆ 5 ಲಕ್ಷ ರೂ. ನಂತೆ ಒಟ್ಟು 15 ಸದಸ್ಯರಿಗೆ (ಒಟ್ಟು 75 ಲಕ್ಷ ರೂ.) ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ಪರಿಹಾರ ಚೆಕ್‌ ವಿತರಿಸಲಿದ್ದಾರೆ ಎಂದರು.

ಅಟಲಜೀ ನಾಡಕಚೇರಿ ಕಟ್ಟಡಗಳ ಶಿಲಾನ್ಯಾಸ

ಕೊಡೇಕಲ್‌, ಸೈದಾಪುರ, ಬಳಿಚಕ್ರ, ದೋರನಹಳ್ಳಿ ಹಾಗೂ ಕಕ್ಕೇರಾ ಅಟಲಜೀ ನಾಡಕಚೇರಿ ಕಟ್ಟಡಗಳಿದ್ದು, ಒಟ್ಟು ಅಂದಾಜು ಮೊತ್ತ 3.20 ಕೋಟಿ ವೆಚ್ಚದಲ್ಲಿ ಹೈಟೆಕ್‌ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸಿ.ಬಿ ವೇದಮೂರ್ತಿ, ಅಪರ ಜಿಲ್ಲಾಧಿಕಾರಿ ಶಂಕರಗೌಡ ಸೋಮನಾಳ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next