Advertisement

Mangaluru ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಕೆ

12:35 AM Jun 29, 2024 | Team Udayavani |

ಮಂಗಳೂರು: ದ.ಕ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಅವರ ಸೂಚನೆಯಂತೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬೀದಿದೀಪ ಕಂಬಗಳ ಫ್ಯೂಸ್‌ ಬಾಕ್ಸ್‌ಗಳಿಗೆ ಟ್ರಿಪ್ಪರ್‌ ಅಳವಡಿಸುವ ಕಾರ್ಯವನ್ನು ಪಾಲಿಕೆ ವಿದ್ಯುತ್‌ ಸರಬರಾಜು ವಿಭಾಗದ ಅಧಿಕಾರಿಗಳು ಮೆಸ್ಕಾಂ ಸಹಕಾರದೊಂದಿಗೆ ಕೈಗೊಂಡಿದ್ದಾರೆ.

Advertisement

ಸ್ಟೇಟ್‌ಬ್ಯಾಂಕ್‌ ಬಳಿಯ ರೊಸಾರಿಯೋ ಶಾಲೆಯ ಹಿಂಭಾಗದಲ್ಲಿ ರಸ್ತೆಯಲ್ಲಿ ತುಂಡಾಗಿ ಬಿದ್ದ ವಿದ್ಯುತ್‌ ತಂತಿಯಿಂದ ವಿದ್ಯುತ್‌ ಪ್ರವಹಿಸಿ ಆಟೋ ಚಾಲಕರಿಬ್ಬರು ಮೃತಪಟ್ಟ ಘಟನೆಯ ಹಿನ್ನೆಲೆಯಲ್ಲಿ ಬೀದಿದೀಪ ಕಂಬಗಳಿಗೂ ಟ್ರಿಪ್ಪರ್‌ ಅಳವಡಿಸುವಂತೆ ಜಿಲ್ಲಾಧಿಕಾರಿ ಪಾಲಿಕೆ ಅಧಿಕಾರಿಗಳಿಗೆ ಗುರುವಾರವೇ ಸೂಚನೆ ನೀಡಿದ್ದರು.

ಅದರಂತೆ ಮುಂಜಾಗ್ರತಾ ಕ್ರಮವಾಗಿ ಶುಕ್ರವಾರದಿಂದ ನಗರದ ಹಲವೆಡೆ ಸ್ಟ್ರೀಟ್‌ ಲೈಟ್ ಮೀಟರ್‌ ಬಾಕ್ಸ್‌ಗಳಲ್ಲಿ ಟ್ರಿಪ್ಪರ್‌ಗಳನ್ನು ಅಳವಡಿಸುವ ಕೆಲಸ ಆರಂಭಿಸಲಾಗಿದೆ. ಪಾಲಿಕೆ ವ್ಯಾಪ್ತಿಯಲ್ಲಿ 1,600ಕ್ಕೂ ಅಧಿಕ ಫ್ಯೂಸ್‌ಗಳಿರುವ ಮೀಟರ್‌ ಬಾಕ್ಸ್‌ಗಳಿದ್ದು, ಮುಂದಿನ 3-4 ದಿನದೊಳಗೆ ಎಲ್ಲ ಕಡೆಗಳಲ್ಲಿ ಟ್ರಿಪರ್‌ಗಳನ್ನು ಅಳವಡಿಸಲಾಗುವುದು. ಇದರಿಂದ ವಿದ್ಯುತ್‌ ತಂತಿ ತುಂಡಾಗಿ ಬಿದ್ದಾಗ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ. ವಿದ್ಯುತ್‌ ತಂತಿ ತುಂಡಾಗಿ ಬಿದ್ದಿರುವುದು, ಜೋತಾಡುವುದು ಕಂಡು ಬಂದರೆ ಬಂದರೆ ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತೆ ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next