Advertisement

ನೆರೆಪೀಡಿತ ಪ್ರದೇಶಗಳಲ್ಲಿ ಮುಂಜಾಗ್ರತೆಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸೂಚನೆ

01:20 AM May 21, 2022 | Team Udayavani |

ಉಡುಪಿ: ಜಿಲ್ಲೆಯಲ್ಲಿ ಮಳೆ ಮತ್ತು ಪ್ರವಾಹ ಪರಿಸ್ಥಿತಿಯಿಂದ ಹಾನಿಗೊಳಗಾಗುವ ಪ್ರದೇಶಗಳನ್ನು ಸಾಕಷ್ಟು ಮುಂಚಿತವಾಗಿ ಗುರುತಿಸಿ, ಆ ಪ್ರದೇಶದಲ್ಲಿ ಅಗತ್ಯ ಮುಂಜಾಗ್ರತ ಕ್ರಮ ಹಾಗೂ ತುರ್ತು ಪರಿಸ್ಥಿತಿಯಲ್ಲಿ ತತ್‌ಕ್ಷ ಣವೇ ಸ್ಪಂದಿಸಲು ಬೇಕಾದ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮನೋಜ್‌ ಜೈನ್‌ ಸೂಚನೆ ನೀಡಿದರು.

Advertisement

ಜಿ.ಪಂ. ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನದಿಗಳ ನೀರು ಸಮುದ್ರ ಸೇರುವ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ತಲೆದೋರುವ ಸಾಧ್ಯತೆಯಿದೆ. ಇಂತಹ ಪ್ರದೇಶದಲ್ಲಿ ಸಾರ್ವಜನಿಕರಿಗೆ ಅಗತ್ಯವಿರುವ ಎಲ್ಲ ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಬೇಕು ಎಂದರು.

ಅಪಾಯಕಾರಿ ಮರ ಗುರುತಿಸಿ
ಮಾನ್ಸೂನ್‌ ಸಂದರ್ಭ ಗಾಳಿ -ಮಳೆಯಿಂದ ಮರಗಳು ಉರುಳುವ ಸಂಭವವಿದ್ದು, ಅಂತಹ ಮರಗಳನ್ನು ಗುರುತಿಸಿ, ತೆರವುಗೊಳಿಸುವ ಕುರಿತು ತತ್‌ ಕ್ಷ ಣವೇ ಕ್ರಮ ತೆಗೆದುಕೊಳ್ಳಬೇಕು. ಇದಕ್ಕಾಗಿ ಅರಣ್ಯ ಇಲಾಖೆಯ ಅನುಮತಿ ವಿಳಂಬವಾದಲ್ಲಿ ಮೊದಲು ಮರಗಳನ್ನು ತೆರವುಗೊಳಿಸಿ ಅನಂತರ ಘಟನೋತ್ತರ ಮಂಜೂರಾತಿ ಪಡೆಯಿರಿ. ಪ್ರಾಕೃತಿಕ ವಿಕೋಪದ ಸಂದರ್ಭದಲ್ಲಿ ಸಾರ್ವಜನಿಕ ಕಾರ್ಯಗಳಿಗೆ ಯಾವುದೇ ತೊಂದರೆ, ವಿಳಂಬವಾಗದಂತೆ ಅಗತ್ಯ ನೆರವು ನೀಡುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಸಾರ್ವಜನಿಕ ಕಟ್ಟಡದ ಆಡಿಟ್‌
ಎಲ್ಲ ಶಾಲಾ ಕಟ್ಟಡಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರುವ ಭವನಗಳ ಸ್ಥಿತಿಗತಿ ಕುರಿತು ಆಡಿಟ್‌ ನಡೆಸಬೇಕು ಎಂದರು.

24 ಗಂಟೆಯಲ್ಲಿ ಪರಿಹಾರ
ವಿಕೋಪದಿಂದ ಮಾನವ ಜೀವ ಹಾನಿಯಾದಲ್ಲಿ ವರದಿಗಳನ್ನು ಶೀಘ್ರ ಸಿದ್ಧಪಡಿಸಿ 24 ಗಂಟೆಯ ಒಳಗೆ ಪರಿಹಾರ ವಿತರಿಸಬೇಕು ಎಂದರು.

Advertisement

ಮೇ 31ರೊಳಗೆ ಎಲ್ಲಾ ಇಲಾಖೆಗಳು ತಮ್ಮ ಕ್ರಿಯಾ ಯೋಜನೆಗಳನ್ನು ಸಿದ್ಧಪಡಿಸಿಕೊಂಡು ಅದರಂತೆ ಕಾರ್ಯ ನಿರ್ವಹಿಸುವಂತೆ ತಿಳಿಸಿದರು.

ಜಿ.ಪಂ. ಸಿಇಒ ಪ್ರಸನ್ನ ಎಚ್‌., ಕುಂದಾಪುರ ಡಿಎಫ್‌ಒ ಆಶೀಶ್‌ ರೆಡ್ಡಿ, ಎಡಿಸಿ ವೀಣಾ, ಎ.ಸಿ. ರಾಜು ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next