Advertisement

ಗುಣಮಟ್ಟದ ಕಾಮಗಾರಿಗೆ ಸೂಚನೆ

04:04 PM Jul 23, 2022 | Team Udayavani |

ರಾಯಚೂರು: ನಗರದ ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ಎಸ್ಕಲೇಟರ್‌, ಲಿಫ್ಟ್‌ ಹಾಗೂ ಹೊರಾಂಗಣದಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಸಂಸದ ರಾಜಾ ಅಮರೇಶ್ವರ ನಾಯಕ ಪರಿಶೀಲಿಸಿದರು.

Advertisement

ಈ ವೇಳೆ ಮಾತನಾಡಿದ ಸಂಸದ ರಾಜಾ ಅಮರೇಶ್ವರ ನಾಯಕ, ರೈಲ್ವೆ ನಿಲ್ದಾಣದಲ್ಲಿ ನಡೆಯುತ್ತಿರುವ ವಿವಿಧ ಕಾಮಗಾರಿಗಳು ತ್ವರಿತಗತಿಯಲ್ಲಿ ನಡೆಸಬೇಕು ಹಾಗೂ ಗುಣಮಟ್ಟ ಕಾಪಾಡಬೇಕು. ರೈಲ್ವೆ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಹೆಚ್ಚಿನ ಸೌಕರ್ಯಗಳು ಒದಗಿಸಲಾಗುತ್ತಿದೆ. ರೈಲ್ವೆ ನಿಲ್ದಾಣದ ಪ್ಲಾಟ್‌ ಫಾರಂ ನಂಬರ್‌ 1 ಹೆಚ್ಚಿನ ಉದ್ದ ಮತ್ತು ಎತ್ತರ ಮಾಡಲಾಗಿದೆ. ಪ್ರಯಾಣಿಕರ ಸುರಕ್ಷತೆ, ಅನುಕೂಲ ಅಡಗಿದೆ. ಸ್ವತ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಸ್ವತ್ಛತೆ ನಿರ್ವಹಿಸುವಲ್ಲಿ ಲೋಪವಾಗಿದ್ದಲ್ಲಿ ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ರೈಲ್ವೆ ಬೋರ್ಡ್‌ ಸದಸ್ಯ ಬಾಬುರಾವ್‌ ಮಾತನಾಡಿ, ಸಂಸದರ ಸಹಕಾರದಿಂದ ಇಲ್ಲಿ ಅಭಿವೃದ್ಧಿ ಕಾರ್ಯಗಳು ಭರದಿಂದ ನಡೆದಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳಲಿದೆ ಎಂದರು.

ಈ ವೇಳೆ ಸ್ಟೇಶನ್‌ ವ್ಯವಸ್ಥಾಪಕ ಎಸ್‌.ಕೆ.ಸರ್ಕಾರ, ಸ್ಟೇಶನ್‌ ಮಾಸ್ತರ್‌ ಓಂಪ್ರಕಾಶ, ಬಿಜೆಪಿ ಮುಖಂಡ ಬಸವರಾಜ ಅಸ್ಕಿಹಾಳ ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next