Advertisement

ಒಟ್ಟಾಗಿ ಕೆಲಸ ಮಾಡುವಂತೆ ಸೂಚನೆ: ಯಡಿಯೂರಪ್ಪ

11:15 PM Apr 12, 2022 | Team Udayavani |

ಬೆಳಗಾವಿ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಜಿಲ್ಲೆಯ 18 ಕ್ಷೇತ್ರಗಳನ್ನು ನಾವು ಗೆಲ್ಲಬೇಕಿದೆ.

Advertisement

ಹೀಗಾಗಿ ಯಾವುದೇ ಭಿನ್ನಾಭಿಪ್ರಾಯಗಳಿಗೆ ಅವಕಾಶ ಕೊಡದೆ ಎಲ್ಲರೂ ಒಟ್ಟಾಗಿ ಕೆಲಸ ಮಾಡುವಂತೆ ಸೂಚನೆ ಕೊಟ್ಟಿದ್ದೇವೆ ಎಂದು ಮಾಜಿ ಸಿಎಂ ಬಿ.ಎಸ್‌. ಯಡಿಯೂರಪ್ಪ ಹೇಳಿದರು.

ಬಿಜೆಪಿ ಕೋರ್‌ ಕಮೀಟಿ ಸಭೆ ಅನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ನಮ್ಮಲ್ಲಿ ಸಣ್ಣಪುಟ್ಟ ಭಿನ್ನಾಭಿಪ್ರಾಯಗಳು ಇದ್ದವು. ಎಲ್ಲರೂ ಒಟ್ಟಾಗಿ ಒಂದೇ ತಾಯಿಯ ಮಕ್ಕಳಂತೆ ಇಲ್ಲಿ ಕೆಲಸ ಮಾಡಬೇಕು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದ್ದೇವೆ. ನಮ್ಮದು ದೊಡ್ಡ ಪಕ್ಷ. ಸಹಜವಾಗಿಯೇ ಸಣ್ಣ ಪುಟ್ಟ ವ್ಯತ್ಯಾಸಗಳಿರುತ್ತವೆ.

ಭಿನ್ನಾಭಿಪ್ರಾಯಗಳಿಗೆ ಅವಕಾಶ ಕೊಡದೆ ಎಲ್ಲ 18 ಕ್ಷೇತ್ರಗಳನ್ನು ನಾವು ಗೆಲ್ಲಬೇಕಿದೆ. ಅದಕ್ಕೆ ಎಲ್ಲವನ್ನೂ ಮರೆತು ಒಟ್ಟಾಗಿ ಕೆಲಸ ಮಾಡಬೇಕು ಎಂದು ಸಲಹೆ ಕೊಟ್ಟಿದ್ದೇವೆ ಎಂದರು.

 

Advertisement
Advertisement

Udayavani is now on Telegram. Click here to join our channel and stay updated with the latest news.

Next