Advertisement

ಕಡಲ್ಕೊರೆತದ ಕುರಿತು ಕ್ರಮ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚನೆ: ಸಿಎಂ ಬೊಮ್ಮಾಯಿ

11:33 AM Jul 07, 2022 | Team Udayavani |

ಬೆಂಗಳೂರು: ಕಾರವಾರ, ಮಂಗಳೂರುಗಳಲ್ಲಿ ಕಡಲ ಕೊರತೆವಾಗಿದೆ. ಡಿಸಿಗಳ ಖಾತೆಯಲ್ಲಿ ಹಣ ಇದೆ.  ಕಡಲ್ಕೊರೆತದ ಬಗ್ಗೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ವಹಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರೇ ಸ್ಥಳಕ್ಕೆ ಹೋಗಿ ಪರಿಶೀಲಿಸಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

Advertisement

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದೆಲ್ಲಿ ಮಳೆಯಾಗುತ್ತಿದೆ. ಈಗಾಗಲೇ ಕಂದಾಯ ಸಚಿವರು ಕೊಡಗಿನಲ್ಲಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ವರದಿಯ ಪ್ರಕಾರ ಇನ್ನೂ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದರು.

ಇದನ್ನೂ ಓದಿ:ಚಾಮುಂಡಿ ಬೆಟ್ಟದ ಮೂಲಸೌಕರ್ಯಕ್ಕೆ ಸಿದ್ದು ಸರಕಾರ‌ ಕೊಟ್ಟಿದ್ದು ಹುಂಡಿ‌ ದುಡ್ಡಾ?

ಬಾದಾಮಿಯ ಕೆರೂರಿನಲ್ಲಿ ಕೋಮುಗಲಭೆ ಪ್ರಕರಣ ವಿಚಾರವಾಗಿ ಮಾತನಾಡಿದ ಸಿಎಂ, ವೈಯಕ್ತಿಕ ಕಾರಣಕ್ಕೆ ಗಲಾಟೆ ನಡೆದಿದೆ. ಕೂಡಲೇ ಪೊಲೀಸರು ಗಲಭೆ ನಿಯಂತ್ರಣ ಮಾಡಿದ್ದಾರೆ. ಕೆಲವರಿಗೆ ಗಾಯಗಳಾಗಿವೆ, ಆಸ್ಪತ್ರೆಗೆ ಸೇರಿಸಲಾಗಿದೆ. ಕೆಲವರ ಬಂಧನವಾಗಿದೆ. ಸ್ಥಳದಲ್ಲಿ 144 ಸೆಕ್ಷನ್ ಜಾರಿ‌ ಮಾಡಲಾಗಿದೆ. ಎರಡೂ ಸಮುದಾಯಗಳಿಗೂ ಶಾಂತವಾಗಿರಲು ಸೂಚಿಸಲಾಗಿದೆ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಬೀಡು ಬಿಟ್ಟಿದ್ದಾರೆ. ಅಧಿಕಾರಿಗಳು ಕ್ರಮ ವಹಿಸಿದ್ದಾರೆ ಎಂದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next