Advertisement

ಪರಿಹಾರ ಕಾಮಗಾರಿಗಳ ಬಗ್ಗೆ ಗಮನಹರಿಸುವಂತೆ ಸೂಚನೆ

10:46 PM Jun 24, 2019 | Team Udayavani |

ಬೆಂಗಳೂರು: ಬರ ಹಾಗೂ ಅತಿವೃಷ್ಟಿ ಪರಿಹಾರ ಕಾಮಗಾರಿಗಳ ಬಗ್ಗೆ ಗಮನಹರಿಸುವಂತೆ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಸೂಚಿಸಿದ್ದಾರೆ. ವಿಧಾನಸೌಧದಲ್ಲಿ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ನಡೆಸಿದ ಅವರು, ಕೆಲವೆಡೆ ಬರವಿದೆ, ಕೆಲವೆಡೆ ಮಳೆಯಿಂದ ಅತಿವೃಷ್ಟಿ ಪರಿಸ್ಥಿತಿ ಎದುರಾಗಬಹುದು.

Advertisement

ಜಿಲ್ಲಾಡಳಿತ ಎಲ್ಲ ರೀತಿಯಲ್ಲೂ ಸಜ್ಜಾಗಬೇಕೆಂದು ನಿರ್ದೇಶನ ನೀಡಿದರು. ಮುಖ್ಯಮಂತ್ರಿಯವರು ಗ್ರಾಮ ವಾಸ್ತವ್ಯ ಮಾಡುತ್ತಿದ್ದು, ಅಲ್ಲಿ ಜನರು ಸಾಕಷ್ಟು ಸಮಸ್ಯೆಗಳ ಬಗ್ಗೆ ಪ್ರಸ್ತಾಪಿಸುತ್ತಿದ್ದಾರೆ. ಜಿಲ್ಲಾಧಿಕಾರಿಗಳು, ಜಿಪಂ ಸಿಇಒಗಳು, ತಹಶೀಲ್ದಾರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ಸ್ಪಂದಿಸಿ ತಮ್ಮ ತಮ್ಮ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಬೇಕೆಂದು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next