Advertisement

ಅಂಬೇಡ್ಕರ್ ಗೆ ಅವಮಾನ: ಹುಣಸೂರಿನಲ್ಲಿ ನ್ಯಾಯಾಧೀಶರ ವಿರುದ್ದ ಪ್ರತಿಭಟನೆ

02:45 PM Jan 27, 2022 | Team Udayavani |

ಹುಣಸೂರು: ರಾಯಚೂರಿನ ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರನ್ನು ಸೇವೆಯಿಂದ ವಜಾಗೊಳಿಸುವ ಜೊತೆಗೆ ದೇಶ ದ್ರೋಹದ ಪ್ರಕರಣ ದಾಖಲಿಸಬೇಕೆಂದು ವಿವಿಧ ಪ್ರಗತಿಪರ ಸಂಘಟನೆಗಳ ಕಾರ್ಯಕರ್ತರು ಗುರುವಾರ ನಗರದ ಸಂವಿಧಾನ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

Advertisement

ಈ ವೇಳೆ ಮಾತನಾಡಿದ ದ.ಸಂ.ಸ ಯ ರತ್ನಪುರಿ ಪುಟ್ಟಸ್ವಾಮಿ, ರಾಮಕೃಷ್ಣ, ಡೇವಿಡ್, ವಕೀಲ ಪುಟ್ಟರಾಜು ಸಂವಿಧಾನದಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನ್ಯಾಯಾಧೀಶರೇ ಅಂಬೇಡ್ಕರ್ ಪೋಟೋ ತೆರವುಗೊಳಿಸಿದರೆ ಮಾತ್ರ ಗಣರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬರುವುದಾಗಿ ಹೇಳಿದ್ದು, ನ್ಯಾಯಾಧೀಶ ಮಲ್ಲಿಕಾರ್ಜುನ ಗೌಡರು ಸಂವಿದಾನಕ್ಕೆ ಅಪಮಾನ ಮಾಡಿದಂತಾಗಿದೆ. ತಕ್ಷಣವೇ ಅವರನ್ನು ಸೇವೆಯಿಂದ ವಜಾಗೊಳಿಸುವ ಜೊತೆಗೆ ದೇಶದ್ರೋಹ ಪ್ರಕರಣ ದಾಖಲಿಸಬೇಕೆಂದು ಆಗ್ರಹಿಸಿದರು.

ಗ್ರೇಡ್- 2 ತಹಸೀಲ್ದಾರ್ ನರಸಿಂಹಯ್ಯರಿಗೆ ಮನವಿ ಸಲ್ಲಿಸಿದರು. ಪ್ರತಿಭಟನೆಯಲ್ಲಿ ಶಿವರಾಜ್. ಕಿಟ್ಟಪ್ಪ. ಶಿವಾನಂದ್. ಸೇರಿದಂತೆ ಅನೇಕರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next