Advertisement

ಕಾರ್ಕಳ: ಕೊರಗಜ್ಜನಿಗೆ ಅವಮಾನ; ಪ್ರಕರಣ ದಾಖಲು

09:44 AM Jan 22, 2022 | Team Udayavani |

ಕಾರ್ಕಳ: ಕೊರಗಜ್ಜನಿಗೆ ಅವಮಾನ ಆಗುವ ರೀತಿಯಲ್ಲಿ ವರ್ತಿಸಿರುವ ಈದುವಿನ ರವೀಂದ್ರ ಅವರ ವಿರುದ್ಧ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement

ಸ್ಟೇಟಸ್‌ ಹಾಕಿದ್ದ ಈದು ಗ್ರಾಮದ ಚೇತನ್‌ ರವರ ಸ್ನೇಹಿತ ಯೋಗೀಶ್‌ ಅವರ ಮೊಬೈಲಿಗೆ ಒಂದು ಸ್ಟೇಟಸ್‌ ಬಂದಿತ್ತು. ಅದರಲ್ಲಿ ಈದುವಿನ ರವೀಂದ್ರ ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ಮಾಡಿರುವುದು ಕಂಡುಬಂದಿತ್ತು. ರವೀಂದ್ರ ತನ್ನ ಮೊಬೈಲಿನಲ್ಲಿ ಸ್ವಾಮಿ ಕೊರಗಜ್ಜನ ಬಗ್ಗೆ ಅಪಹಾಸ್ಯ ಮಾಡಿ ಸ್ಟೇಟಸ್‌ ಹಾಕಿಕೊಂಡಿದ್ದ.

ಉಡಾಫೆ ಉತ್ತರ ನೀಡಿದ್ದ: ಕೊರಗಜ್ಜ ದೈವದ ಅವಹೇಳನ ಮಾಡಿರುವುದು ಧಾರ್ಮಿಕ ಭಾವನೆಗೆ ನೋವಾಗುವ ರೀತಿಯಲ್ಲಿದ್ದ ಕಾರಣ ಸ್ನೇಹಿತ‌ ಯೋಗೀಶನ ಮೊಬೈಲ್‌ ನಿಂದ ಚೇತನ್‌ ರವರು ರವೀಂದ್ರನ ಮೊಬೈಲ್‌ ಗೆ ಕರೆ ಮಾಡಿ ವಿಚಾರಿಸಿದಾಗ ರವೀಂದ್ರನು ತಾನು ಕೊರಗಜ್ಜನ ಬಗ್ಗೆ ಸ್ಟೇಟಸ್‌ ಹಾಕಿದ್ದೇನೆ ಏನಾಯ್ತು, ಮುಂದೆಯೂ ಇದಕ್ಕಿಂತ ಹೆಚ್ಚಿನ ರೀತಿಯ ವೇಷ ಹಾಕಿ ಸಂಭ್ರಮಿಸುತ್ತೇನೆ ಎಂದು ಮರು ಉತ್ತರ ನೀಡಿದ್ದ ಎನ್ನಲಾಗಿದೆ.

ಇದನ್ನೂ ಓದಿ:ಸ್ಥಳೀಯ ಅಕ್ಕಿ ವಿತರಣೆಗೆ ಭತ್ತದ ಬಿತ್ತನೆ ಹೆಚ್ಚಬೇಕು

ಸಾಮರಸ್ಯಕ್ಕೆ ಧಕ್ಕೆ ಕೇಸು: ಕೊರಗಜ್ಜನ ವೇಷ ಹಾಕಿ ಅಪಹಾಸ್ಯ ಮಾಡಿ ಧಾರ್ಮಿಕ ಭಾವನೆ ಹಾಗೂ ಸಾಮರಸ್ಯಕ್ಕೆ ಧಕ್ಕೆ ಉಂಟು ಮಾಡಿದ ಬಗ್ಗೆ ಚೇತನ್‌ ನೀಡಿದ ದೂರಿನಂತೆ ರವೀಂದ್ರನ ವಿರುದ್ಧ ಕಾರ್ಕಳ ಗ್ರಾಮಾಂತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next