Advertisement

BJP: ಉಪ ರಾಷ್ಟ್ರಪತಿಗೆ ಅವಮಾನ- ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ

11:13 PM Dec 21, 2023 | Team Udayavani |

ಬೆಂಗಳೂರು: ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರನ್ನು ಅಪಮಾನಿಸುವ ರೀತಿ ಅಣುಕು ಪ್ರದರ್ಶನ ನಡೆಸಿದ್ದನ್ನು ಖಂಡಿಸಿ ಬಿಜೆಪಿ ಜಿಲ್ಲಾ ಘಟಕಗಳ ವತಿಯಿಂದ ರಾಜ್ಯದ ಹಲವೆಡೆ ಗುರುವಾರ ಪ್ರತಿಭಟನೆ ನಡೆಸಲಾಯಿತು.

Advertisement

ಇದೇ ವೇಳೆ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಟಿಎಂಸಿ ಸಂಸದರ ವಿರುದ್ಧ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಮೈಸೂರಿನಲ್ಲಿ ಬಿಜೆಪಿ ನಗರ, ಗ್ರಾಮಾಂತರ ಸಮಿತಿ ವತಿಯಿಂದ ನೂರಾರು ಕಾರ್ಯಕರ್ತರು ಗಾಂಧಿ ವೃತ್ತದಲ್ಲಿ ಪ್ರತಿಭಟಿಸಿದರು.

ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ, ಮಂಡ್ಯ ನಗರದ ಜೆ.ಸಿ.ವೃತ್ತದಲ್ಲಿ, ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲೂ ಪ್ರತಿಭಟನೆ ನಡೆಸಲಾಯಿತು. ಕೆಲವೆಡೆ ರಾಹುಲ್‌ ಗಾಂಧಿ ಪ್ರತಿಕೃತಿಯನ್ನು ದಹಿಸಿ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾವಿ, ಚಿಕ್ಕಬಳ್ಳಾಪುರ, ಶಿವಮೊಗ್ಗ ಮುಂತಾದೆಡೆಯೂ ಪ್ರತಿಭಟನೆ ನಡೆಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next