Advertisement

ಸರ್ಜಿಕಲ್ ದಾಳಿಗೆ ನಿಜವಾದ ಕಾರಣ ಗೊತ್ತಾ? ಸತ್ಯ ಬಿಚ್ಚಿಟ್ಟ ಪರ್ರೀಕರ್

02:08 PM Jul 01, 2017 | Team Udayavani |

ಪಣಜಿ:ದೇಶ, ವಿದೇಶದಲ್ಲಿ ಸುದ್ದಿಯಾಗಿದ್ದ ಸರ್ಜಿಕಲ್ ದಾಳಿಗೆ ನಿಜವಾದ ಕಾರಣ ಏನು ಎಂಬುದನ್ನು ಕೇಂದ್ರದ ಮಾಜಿ ರಕ್ಷಣಾ ಸಚಿವ, ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಶುಕ್ರವಾರ ಬಯಲುಗೊಳಿಸಿದ್ದಾರೆ. ಪಾಕಿಸ್ತಾನ ಆಕ್ರಮಿತ (ಪಿಒಕೆ) ಕಾಶ್ಮೀರದಲ್ಲಿ ಭಾರತೀಯ ಸೇನೆ ನಡೆಸಿದ ಸರ್ಜಿಕಲ್ ದಾಳಿಗೆ ಟಿವಿ ಆಂಕರ್ ಪ್ರಶ್ನೆ ಕೇಳಿ ಅವಮಾನಿಸಿದ್ದೇ ಕಾರಣ ಎಂದು ತಿಳಿಸಿದ್ದಾರೆ.

Advertisement

2015ರಲ್ಲಿ ಮ್ಯಾನ್ಮಾರ್ ಗಡಿಯೊಳಗೆ ನುಗ್ಗಿ ಭಾರತೀಯ ಸೇನೆ ನಡೆಸಿದ ನಿರ್ದಿಷ್ಟ ದಾಳಿ ಬಗ್ಗೆ ರಾಜ್ಯವರ್ಧನ್ ಸಿಂಗ್ ರಾಥೋಡ್ ಅವರು ಟಿವಿ ಆಂಕರ್ ಗೆ ಮಾಹಿತಿ ನೀಡುತ್ತಿದ್ದ ವೇಳೆ, ಮ್ಯಾನ್ಮಾರ್ ಗಡಿಯೊಳಗೆ ತೋರಿದ ಧೈರ್ಯ ನೆರೆಯ ದೇಶದ ಮೇಲೆ ತೋರಲು ಸಾಧ್ಯವೆ ಎಂಬ ಪ್ರಶ್ನೆ ಕೇಳಿ ಅವಮಾನಿಸಿದ್ದರು.

ಹಾಗಾಗಿ ಟಿವಿ ಆಂಕರ್ ಆ ಪ್ರಶ್ನೆ ಕೇಳಿದ್ದ ದಿನವೇ ಪಿಒಕೆ ಮೇಲೆ ಸರ್ಜಿಕಲ್ ದಾಳಿ ನಡೆಸಲು ನಿರ್ಧರಿಸಿದ್ದೆ ಎಂದು ಪರ್ರೀಕರ್ ಪಣಜಿಯಲ್ಲಿ ಕೈಗಾರಿಕೋದ್ಯಮಿಗಳ ಸಭೆಗೂ ಮುನ್ನ ಮಾತನಾಡುತ್ತ ಈ ವಿಷಯವನ್ನು ಬಿಚ್ಚಿಟ್ಟಿದ್ದರು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರದೊಳಗೆ ಸರ್ಜಿಕಲ್ ದಾಳಿ ನಡೆಸಲು 15 ತಿಂಗಳ ಮುಂಚಿತವಾಗಿಯೇ ಸಿದ್ಧತೆ ನಡೆಸಲಾಗಿತ್ತು ಎಂದು ಪರ್ರೀಕರ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next