Advertisement

Mangaluru ಫೇಸ್‌ಬುಕ್‌ನಲ್ಲಿ ಸ್ಪೀಕರ್‌ ಖಾದರ್‌ಗೆ ಅವಹೇಳನ: ಪ್ರಕರಣ ದಾಖಲು

12:01 AM Dec 13, 2023 | Team Udayavani |

ಮಂಗಳೂರು: ಫೇಸ್‌ಬುಕ್‌ನಲ್ಲಿ ವಿಧಾನಸಭೆಯ ಸ್ಪೀಕರ್‌ ಯು.ಟಿ. ಖಾದರ್‌ ಅವರ ಭಾವಚಿತ್ರವನ್ನು ಎಡಿಟ್‌ ಮಾಡಿ ಅವಹೇಳನಕಾರಿ ಸಂದೇಶ ಪೋಸ್ಟ್‌ ಮಾಡಿದ ಬಗ್ಗೆ ನಗರದ ಸೈಬರ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

Advertisement

“ಮೊಹಮ್ಮದ್‌ ರಿಯಾಜ್‌’ ಮತ್ತು “ಮೊಹಮ್ಮದ್‌ ಮುಸ್ತಫಾ’ ಎಂಬ ಹೆಸರಿನ ಫೇಸ್‌ಬುಕ್‌ ಖಾತೆಯಲ್ಲಿ ಖಾದರ್‌ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಹಾಕಲಾಗಿದೆ.

ಕೋಮುಭಾವನೆ ಕೆರಳಿಸುವ ಉದ್ದೇಶದಿಂದ ಪೋಸ್ಟ್‌ಗಳನ್ನು ಹಾಕಿರುವುದು ಕಂಡುಬಂದಿರುವ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next