(ಜು.31) ವಿವಿಧ ಮಠಾಧೀಶರು ಸುವರ್ಣ ವಿಧಾನಸೌಧದ ಎದುರು ಸಾಂಕೇತಿಕ ಧರಣಿ ನಡೆಸಲಿದ್ದಾರೆ.
Advertisement
ನಾಗನೂರು ರುದ್ರಾಕ್ಷಿಮಠದ ಡಾ.ಸಿದ್ಧರಾಮ ಸ್ವಾಮಿಗಳು, ನಿಡಸೋಸಿಯ ಪಂಚಮಲಿಂಗೇಸ್ವರ ಸ್ವಾಮೀಜಿ, ಹುಕ್ಕೇರಿಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಸೇರಿ ಉ.ಕ.ಭಾಗದ 50 ಕ್ಕೂ ಹೆಚ್ಚು ಮಠಾಧೀಶರು ಬೆಳಗ್ಗೆ
11 ರಿಂದ ಮಧ್ಯಾಹ್ನ 2 ರವರೆಗೆ ಧರಣಿಯಲ್ಲಿ ಭಾಗವಹಿಸಲಿದ್ದಾರೆ.
ಶಾಸಕರಾದ ಉಮೇಶ ಕತ್ತಿ, ಪಿ. ರಾಜೀವ, ಎ.ಎಸ್. ಪಾಟೀಲ ನಡಹಳ್ಳಿ ಧರಣಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ. ಉತ್ತರ ಕರ್ನಾಟಕ ವಿಕಾಸ ವೇದಿಕೆ, ಉತ್ತರ ಕರ್ನಾಟಕ ಹೋರಾಟ ಸಮಿತಿ ಸೇರಿದಂತೆ ವಿವಿಧ ಸಂಘಟನೆಗಳು
ಬೆಂಬಲ ವ್ಯಕ್ತಪಡಿಸಿವೆ. ಈ ಮಧ್ಯೆ, ಧರಣಿ ಸತ್ಯಾಗ್ರಹದಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ಧ್ವಜ ಹಾರಿಸುವ ನಿರ್ಧಾರ ಮಾಡಿಲ್ಲ. ಈ ಬಗ್ಗೆ ಮಠಾಧೀಶರೊಂದಿಗೆ ಚರ್ಚೆ ಮಾಡಿ ಅವರ ಅಭಿಪ್ರಾಯದಂತೆ ಮುಂದಿನ ಹೆಜ್ಜೆ ಇಡಲಾಗುವುದು ಎಂದು ಉತ್ತರ ಕರ್ನಾಟಕ ಹೋರಾಟ ಸಮಿತಿ ಅಧ್ಯಕ್ಷ ಭೀಮಪ್ಪ ಗಡಾದ ಹಾಗೂ ಉತ್ತರ ಕರ್ನಾಟಕ ವಿಕಾಸ ವೇದಿಕೆಯ ಮುಖಂಡ ಅಶೋಕ ಪೂಜಾರಿ ಹೇಳಿದ್ದಾರೆ.
Related Articles
ಬೆಳಗ್ಗೆ 11.30 ರಿಂದ ಮಧ್ಯಾಹ್ನ 1.30 ರವರೆಗೆ ಅನುಮತಿ ನೀಡಲಾಗಿದೆ. ಆದರೆ ಇದೇ ವೇಳೆ ಪ್ರತ್ಯೇಕ ರಾಜ್ಯದ
ಧ್ವಜಾರೋಹಣ ಮಾಡುವ ಬಗ್ಗೆ ಯಾರೂ ಅನುಮತಿ ಪಡೆದುಕೊಂಡಿಲ್ಲ. ಧರಣಿಗೆ ಅನುಮತಿ ಕೊಡುವ ವೇಳೆ ಈ
ವಿಷಯ ಪ್ರಸ್ತಾಪ ಆಗಿಲ್ಲ ಎಂದು ನಗರ ಪೊಲೀಸ್ ಆಯುಕ್ತ ಡಿ.ಸಿ. ರಾಜಪ್ಪ ಉದಯವಾಣಿಗೆ ತಿಳಿಸಿದರು.
Advertisement