Advertisement

ಬುದ್ಧಿಜೀವಿ, ಚಿಂತಕರನ್ನು ಜರಿಯುವುದು ಸರಿಯಲ್ಲ

11:57 AM Jan 30, 2017 | |

ಬೆಂಗಳೂರು: “ಸಮಾಜದಲ್ಲಿ ಇತ್ತೀಚಿನ ದಿನದಲ್ಲಿ ಬುದ್ದಿಜೀವಿಗಳು, ಚಿಂತಕರನ್ನು ಕೇವಲವಾಗಿ ಕಾಣುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಇದು ಒಳ್ಳೆಯ ಬೆಳವಣಿಗೆಯಲ್ಲ,” ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ದಿನೇಶ್‌ ಅಮಿನ್‌ಮಟ್ಟು ಅಭಿಪ್ರಾಯಪಟ್ಟಿದ್ದಾರೆ. 

Advertisement

ನಗರದ ಕನ್ನಡ ಸಾಹಿತ್ಯ ಪರಿಷತ್‌ನಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಹೇಮಲತಾ ಮೂರ್ತಿ ಅವರ “ಕಳಚಿಟ್ಟಿದ್ದೇನೆ ಇದೋ ನಿರ್ವಾಣ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ  ಮಾತನಾಡಿದ ಅವರು, “ಸಾಹಿತ್ಯ ಕ್ಷೇತ್ರದಲ್ಲಿ ಕೃಷಿ ಮಾಡುತ್ತಿರುವವರ ಬಗ್ಗೆ ಕೇವಲವಾಗಿ ಮಾತನಾಡುತ್ತಿರುವುದು ಇತ್ತೀಚೆಗೆ ಹೆಚ್ಚಾಗುತ್ತಿದೆ. ಇದು ಸಾಹಿತ್ಯ ಕ್ಷೇತ್ರದ ನೈತಿಕತೆ ಕುಸಿಯುವಂತೆ ಮಾಡುತ್ತದೆ,” ಎಂದು ಹೇಳಿದರು. 

“ಸಮಾಜದ ಇಂತಹ ಕ್ಲಿಷ್ಟಕರ ಸ್ಥಿತಿಯಲ್ಲಿ ಉದಯೋನ್ಮುಖ ಬರ­ಹಗಾರರು ಬರೆಯುವುದು ಕಷ್ಟ. ಅದ­ರಲ್ಲೂ ಮಹಿಳಾ ಬರಹಗಾರರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಳ್ಳುವುದು ಸುಲಭದ ಮಾತಲ್ಲ. ಲೇಖಕಿ ಹೇಮಲತಾ ಅವರು ಸಾಹಿತ್ಯ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವುದು ಶ್ಲಾಘನೀಯ ಎಂದರು. 

Advertisement

Udayavani is now on Telegram. Click here to join our channel and stay updated with the latest news.

Next