Advertisement

ಮಕ್ಕಳಿಗೆ ಬುದ್ಧಿವಾದ; ಪೋಷಕರಿಗೆ ಕಿವಿಮಾತು ಹೇಳಿದ ಕೋರ್ಟ್‌

12:33 PM Dec 01, 2018 | Team Udayavani |

ಬೆಂಗಳೂರು: ಸ್ಥಿರಾಸ್ತಿ ಮೇಲಿನ ಹಕ್ಕು ಸಾಧಿಸುವ ಪ್ರಕರಣವೊಂದರ ವಿಚಾರಣೆ ವೇಳೆ ಶುಕ್ರವಾರ ಮಕ್ಕಳಿಗೆ ಬುದ್ಧಿವಾದ ಹೇಳಿದ ಹೈಕೋರ್ಟ್‌ ಮಕ್ಕಳನ್ನು ಬೆಳೆಸುವ ರೀತಿ ಬಗ್ಗೆ ಪೋಷಕರಿಗೆ ಕಿವಿಮಾತು ಹೇಳಿತು. ಈ ಕುರಿತ ಅರ್ಜಿಯೊಂದರ ವಿಚಾರಣೆ ನಡೆಸಿದ ನ್ಯಾ. ಬಿ. ವೀರಪ್ಪ ಅವರಿದ್ದ ಏಕಸದಸ್ಯ ನ್ಯಾಯಪೀಠ, ಮಕ್ಕಳು ಹಾಗೂ ಪೋಷಕರ ನಡುವಿನ ಬಾಂಧವ್ಯಕ್ಕೆ ಪ್ರೀತಿ-ವಿಶ್ವಾಸವೇ ಸೇತುವೆ ಎಂದು ಅಭಿಪ್ರಾಯಪಟ್ಟಿತು.

Advertisement

ತನಗೆ ಬರೆದ ದಾನಪತ್ರವನ್ನು ತಾಯಿ ವಾಪಸ್‌ ಪಡೆದಿರುವ ಕ್ರಮವನ್ನು ಪ್ರಶ್ನಿಸಿ ಮೈಸೂರಿನ ಎನ್‌.ಡಿ. ವನಮಾಲಾ ಅರ್ಜಿ ಸಲ್ಲಿಸಿದ್ದರು. ಇದರ ವಿಚಾರಣೆ ನಡೆಸಿದ ನ್ಯಾಯಪೀಠ, 82 ವರ್ಷದ ವಿಧವೆ ತಾಯಿಯ ಪೋಷಣೆ ಬಗ್ಗೆ ಕಾಳಜಿ ವಹಿಸದೇ ಆಕೆಯ ಸ್ಥಿರಾಸ್ತಿ ಮೇಲೆ ಹಕ್ಕು ಸಾಧಿಸಲು ಹೊರಟ ಮಗಳ ನಡೆಗೆ ತೀವ್ರ ಅಸಮಧಾನ ವ್ಯಕ್ತಪಡಿಸಿತು. ಅಲ್ಲದೇ ಮಗಳು ಸಲ್ಲಿಸಿದ ರಿಟ್‌ ಅರ್ಜಿಯನ್ನು ನ್ಯಾಯಪೀಠ ವಜಾಗೊಳಿಸಿತು.

ವಿಚಾರಣೆ ನಡೆಸಿದ ನ್ಯಾಯಪೀಠ, ಆದೇಶದಲ್ಲಿ ಭಗವದ್ಗೀತೆಯ ಶ್ಲೋಕಗಳು ಮತ್ತು ಡಿ.ವಿ. ಗುಂಡಪ್ಪ ಅವರ ಮಂಕು ತಿಮ್ಮನ ಕಗ್ಗದ ಸಾಲುಗಳನ್ನು ಉಲ್ಲೇಖೀಸಿ “ದಯೆಗಿಂತ ದೊಡ್ಡದಾದ ಧರ್ಮ ಯಾವುದೂ ಇಲ್ಲ. ತಂದೆ-ತಾಯಿಗಿಂತ ದೊಡ್ಡ ದೇವರಿಲ್ಲ, ಕ್ರೋಧಕ್ಕಿಂತ ದೊಡ್ಡ ಶತ್ರು ಇನ್ನೊಂದಿಲ್ಲ. ಮರ್ಯಾದೆಗಿಂತ ದೊಡ್ಡ ಸಂಪತ್ತು ಮತ್ತೂಂದಿಲ್ಲ.

ಪೋಷಕರು ಇಲ್ಲದೇ ನಾವು ಈ ಭೂಮಿಯ ಮೇಲೆ ಹುಟ್ಟಿ ಬಂದಿಲ್ಲ. ಅವರು ನಮ್ಮನ್ನು ಸಾಕಿ, ಸಲುಹಿ, ಶಿಕ್ಷಣ ನೀಡಿ ಬೆಳೆಸಿದ್ದಾರೆ. ಮಕ್ಕಳು ಪೋಷಕರ ಗೌರವ ಕಳೆಯಬಾರದು. ಅವರ ಬಾಳಿನ ಇಳಿವಯಸ್ಸಿನಲ್ಲಿ ನಾವು ಅವರನ್ನು ಚೆನ್ನಾಗಿ ನೋಡಿಕೊಳ್ಳಬೇಕು ಎಂದು ಹೇಳಿದೆ.

ಇದೇ ವೇಳೆ “ಮಕ್ಕಳು ಈ ದೇಶದ ಆಸ್ತಿ. ಹಿರಿಯರ ಬಗ್ಗೆ ಗೌರವ, ಆದರ ಹಾಗೂ ಪ್ರೀತಿ ಸದಾ ರೂಢಿಸಿಕೊಳ್ಳುವಂತೆ ಅವರನ್ನು ಬೆಳೆಸುವಲ್ಲಿ ಪೋಷಕರು ನಿಗಾ ವಹಿಸಬೇಕು. ಅಂತೆಯೇ ಮಕ್ಕಳೂ ಪೋಷಕರ ತ್ಯಾಗವನ್ನು ಮರೆಯಬಾರದು ಎಂದು ನ್ಯಾಯಪೀಠ ಆದೇಶದಲ್ಲಿ ಹೇಳಿತು.

Advertisement

ಏನಿದು ಪ್ರಕರಣ?: ನಮ್ಮ ತಾಯಿ ನಮಗೆ ಬರೆದಿದ್ದ ದಾನಪತ್ರವನ್ನು ವಾಪಸು ಪಡೆದಿದ್ದಾರೆ. ಇದನ್ನು ಮೈಸೂರಿನ ಉಪವಿಭಾಗಧಿಕಾರಿ ನೀಡಿದ್ದ ಆದೇಶವನ್ನು ಜಿಲ್ಲಾಧಿಕಾರಿ ಮುಂದೆ ಪ್ರಶ್ನಿಸಲಾಗಿತ್ತು. ಆದರೆ, ಜಿಲ್ಲಾಧಿಕಾರಿ ಕೂಡಾ ಹಿರಿಯ ನಾಗರಿಕರು ಹಾಗೂ ಪೋಷಕರ ನಿರ್ವಹಣೆ ಮತ್ತು ಕಲ್ಯಾಣ ಕಾಯ್ದೆ2007ರ ಕಲಂ 23 (1)ರ ಪ್ರಕಾರ ನೀಡಲಾಗಿರುವ ಉಪವಿಭಾಗಾಧಿಕಾರಿಯವರ ಆದೇಶವನ್ನು ಎತ್ತಿ ಹಿಡಿದ್ದಾರೆ.

ಇದು ಕಾನೂನು ಬಾಹಿರ ಎಂದುಈ ಆದೇಶ ಎ.ಸಿ ಆದೇಶವನ್ನು ಎತ್ತಿ ಹಿಡಿದಿದ್ದಾರೆ. ಇದು ಕಾನೂನು ಬಾಹಿರ ಎಂದು ಆಕ್ಷೇಪಿಸಿ ಮೈಸೂರಿನ ಎನ್‌.ಡಿ.ವನಮಾಲಾ ಅರ್ಜಿ ಸಲ್ಲಿಸಿದ್ದರು. ಅದನ್ನು ನ್ಯಾಯಪೀಠ ವಜಾಗೊಳಿಸಿತು.

Advertisement

Udayavani is now on Telegram. Click here to join our channel and stay updated with the latest news.

Next