Advertisement

ರಾಜ್ಯದಲ್ಲಿ ಗುಪ್ತಚರ ಇಲಾಖೆ‌ ಸತ್ತು ಹೋಗಿದೆ: ಸಿದ್ದರಾಮಯ್ಯ ವಾಗ್ದಾಳಿ

10:34 AM Dec 20, 2021 | Team Udayavani |

ಬೆಳಗಾವಿ: ರಾಜ್ಯದ ಕಾನೂನು ಸುವ್ಯವಸ್ಥೆ ಹಾಳಾಗಿದ್ದು ಇಲಾಖೆಯಂತೂ ಸತ್ತು ಹೋಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Advertisement

ಅನಗೋಳದಲ್ಲಿ ಮರು‌ಪ್ರತಿಷ್ಠಾಪನೆ ಆಗಿರುವ ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ನಮಸ್ಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಯುಧಗಳನ್ನು ಹಿಡಿದುಕೊಂಡು ಬಂದು ಮೂರ್ತಿ ವಿರೂಪಗೊಳಿಸಿದ್ದು ನೋಡಿದರೆ ಕಾನೂನು ಮತ್ತು ಸುವ್ಯವಸ್ಥೆ ಹಾಳಾಗಿದೆ ಎಂದು ಅರ್ಥ.‌ ಪೊಲೀಸರ ಬಗ್ಗೆ ಇವರಿಗೆ ಭಯ ಇಲ್ಲ ಎಂಬುದು ಸ್ಪಷ್ಟವಾಗಿ ಗೊತ್ತಾಗುತ್ತದೆ ಎಂದರು.

ಇದನ್ನೂ ಓದಿ:ಕನ್ನಡ ಬಾವುಟಕ್ಕೆ ಚಪ್ಪಲಿಯಿಂದ ಹೊಡೆದು ಸುಟ್ಟು ಹಾಕಿದ ಕಾಂಗ್ರೆಸ್ ಕಾರ್ಯಕರ್ತರು!

ರಾಯಣ್ಣ ಮೂರ್ತಿಯನ್ನು ವಿರೂಪಗೊಳಿಸಿದವರು ಪುಂಡರು, ಪೋಕರಿಗಳು. ಸಂಗೊಳ್ಳಿ ರಾಯಣ್ಣ ಒಂದು ಜಾತಿಗೆ ಸೀಮಿತರಲ್ಲ. ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ರಾಷ್ಟ್ರಭಕ್ತ, ಸ್ವಾತಂತ್ರ್ಯ ಹೋರಾಟಗಾರನ ಪ್ರತಿಮೆ ಭಗ್ನಗೊಳಿಸಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಕಾರಣರಾಗಿದ್ದಾರೆ. ಇಂಥವರ ವಿರುದ್ಧ ಕಠಿಣ ಕ್ರಮ ಕೈಗೊಳಬೇಕು ಎಂದು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next