Advertisement
ಬೆಂಗಳೂರಿನಿಂದ ಬಂದು ಶಿವಮೊಗ್ಗದಲ್ಲಿ ನಿಲ್ಲುತ್ತಿದ್ದ ಇಂಟರ್ಸಿಟಿ ರೈಲನ್ನು ತಾಳಗುಪ್ಪವರೆಗೆ ವಿಸ್ತರಿಸಬೇಕು ಎಂದು ಸ್ಥಳೀಯ ರೈಲ್ವೆ ಹೋರಾಟ ಸಮಿತಿ, ಕನ್ನಡಪರ ಸಂಘಟನೆಗಳು, ಬಳಕೆದಾರರ ವೇದಿಕೆ, ಸಾರ್ವಜನಿಕರು ಒತ್ತಾಯಿಸುತ್ತಾ ಬಂದಿದ್ದರು. ಒಂದು ಹಂತದಲ್ಲಿ ಶಿವಮೊಗ್ಗದ ಪ್ರಭಾವಿಗಳು ತಾಳಗುಪ್ಪವರೆಗೆ ಇಂಟರ್ಸಿಟಿ ರೈಲು ವಿಸ್ತರಿಸಲು ಅಡ್ಡಗಾಲು ಹಾಕುತ್ತಿದ್ದಾರೆ ಎನ್ನುವ ಆರೋಪ ಸಹ ಕೇಳಿ ಬಂದಿತ್ತು.
Related Articles
Advertisement
ಹಾಲಪ್ಪ ಅವರಿಂದ ಕೃತಜ್ಞತೆ: ಇಂಟರ್ಸಿಟಿ ರೈಲು ವಿಸ್ತರಣೆಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರನ್ನು ಗುರುವಾರ ಶಾಸಕ ಹಾಲಪ್ಪ ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದಾರೆ. ಮಲೆನಾಡು ಜನರ ಬಹುಕಾಲದ ಬೇಡಿಕೆ ಈಡೇರಿಸಿರುವ ಹಿನ್ನೆಲೆಯಲ್ಲಿ ಯಡಿಯೂರಪ್ಪ ಅವರಿಗೆ ಶಾಲು ಹೊದೆಸಿ ಸನ್ಮಾನಿಸುವ ಮೂಲಕ ಕ್ಷೇತ್ರದ ಜನರ ಪರವಾಗಿ ಅಭಿನಂದನೆ ಸಲ್ಲಿಸಿದ್ದಾರೆ.ಹೋರಾಟ ಸಮಿತಿ ಅಭಿನಂದನೆ: ಬೆಂಗಳೂರು-ಶಿವಮೊಗ್ಗ ಇಂಟರ್ಸಿಟಿ ರೈಲನ್ನು ತಾಳಗುಪ್ಪವರೆಗೆ ವಿಸ್ತರಿಸಿರುವುದಕ್ಕೆ ರೈಲ್ವೆ ಹೋರಾಟ ಸಮಿತಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹಾಗೂ ಶಾಸಕ ಎಚ್. ಹಾಲಪ್ಪ ಅವರಿಗೆ ಕೃತಜ್ಞತೆ ಸಲ್ಲಿಸಿದೆ. ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದ ಇಂಟರ್ಸಿಟಿ ರೈಲಿನ ಬೇಡಿಕೆಯನ್ನು ಮಾಜಿ ಮುಖ್ಯಮಂತ್ರಿಗಳು, ಶಿವಮೊಗ್ಗ ಲೋಕಸಭಾ ಕ್ಷೇತ್ರದ ಮಾಜಿ ಸಂಸದರಾದ ಬಿ.ಎಸ್.ಯಡಿಯೂರಪ್ಪ ಅವರು ಈಡೇರಿಸಿದ್ದಾರೆ. ಇದಕ್ಕೆ ಕ್ಷೇತ್ರದ ಶಾಸಕ ಎಚ್.ಹಾಲಪ್ಪ ಸಾಥ್ ನೀಡಿದ್ದಾರೆ. ಇವರ ಪ್ರಯತ್ನದಿಂದ ಮಲೆನಾಡಿನ ಜನರು ಇಂಟರ್ಸಿಟಿ ರೈಲಿನಲ್ಲಿ ಓಡಾಡುವ ಕನಸು ಈಡೇರಿದೆ ಎಂದು ಹೋರಾಟ ಸಮಿತಿ ತಿಳಿಸಿದೆ. ಈ ಹೋರಾಟಕ್ಕೆ ಸದಾ ಬೆನ್ನೆಲುಬಾಗಿ ನಿಂತ ಆನಂದಪುರ ಮುರುಘಾಮಠದ ಡಾ|ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮಿಗಳ ಸಹಕಾರ ಅಮೂಲ್ಯವಾದದ್ದು, ಜೊತೆಗೆ ಸಾಗರದ ಪತ್ರಕರ್ತರು, ಬಳಕೆದಾರರ ವೇದಿಕೆ, ವಿವಿಧ ಕನ್ನಡಪರ ಸಂಘಟನೆಗಳು, ಜನಪ್ರತಿನಿ ಗಳು, ಸಾರ್ವಜನಿಕರು ಹೋರಾಟಕ್ಕೆ ಸದಾ ಬೆಂಬಲ ನೀಡಿದ್ದು, ಅವರಿಗೆ ಹೋರಾಟ ಸಮಿತಿ ಪರವಾಗಿ ಪ್ರಧಾನ ಕಾರ್ಯದರ್ಶಿ ವಿಲಿಯಂ ಕೃತಜ್ಞತೆ ಸಲ್ಲಿಸಿದ್ದಾರೆ.