Advertisement

ಕೆಎಟಿ ಆದೇಶಕ್ಕೆ ಮಧ್ಯಂತರ ತಡೆ

08:11 AM May 15, 2020 | Lakshmi GovindaRaj |

ಬೆಂಗಳೂರು: ಮೋಟಾರು ವಾಹನ ಇನ್ಸ್‌ ಪೆಕ್ಟರ್‌ ಹುದ್ದೆಗಳಿಗೆ ಇಬ್ಬರು ಅಭ್ಯರ್ಥಿಗಳ ಉಮೇದುವಾರಿಕೆಯನ್ನು ತಿರಸ್ಕರಿಸಿದ ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ)ದ ಕ್ರಮವನ್ನು ರದ್ದುಪಡಿಸಿ ಕರ್ನಾಟಕ ಆಡಳಿತ  ನ್ಯಾಯಮಂಡಳಿ (ಕೆಎಟಿ) ನೀಡಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ.

Advertisement

ಕೆಎಟಿ ಆದೇಶ ಪ್ರಶ್ನಿಸಿ ವಿ.ಆರ್‌.ಲೋಕೇಶ್‌ ಸೇರಿ ಮೋಟಾರು ವಾಹನ ಇನ್ಸ್‌ಪೆಕ್ಟರ್‌ ಹುದ್ದೆಗೆ ಆಯ್ಕೆಯಾಗಲಿರುವ 11 ಮಂದಿ ಸಂಭಾವ್ಯ  ಅಭ್ಯರ್ಥಿಗಳು ಸಲ್ಲಿಸಿದ್ದ ತಕರಾರು ಅರ್ಜಿ ವಿಚಾರಣೆ ನಡೆಸಿದ ನ್ಯಾ.ಬಿ.ವಿ. ನಾಗರತ್ನ ಮತ್ತು ನ್ಯಾ.ಎಂ.ಜಿ. ಉಮಾ ಅವರಿದ್ದ ವಿಭಾಗೀಯ ನ್ಯಾಯಪೀಠ ಈ ಆದೇಶ ಮಾಡಿದೆ. ಅಲ್ಲದೇ ಪ್ರತಿವಾದಿಗಳಾದ ಕರ್ನಾಟಕ ಲೋಕಸೇವಾ ಆಯೋಗ,  ಸಾರಿಗೆ ಇಲಾಖೆಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಮೇ 27ಕ್ಕೆ ಮುಂದೂಡಿತು.

ಅರ್ಜಿದಾರರ ಪರ ಹಿರಿಯ ನ್ಯಾಯವಾದಿ ಎ.ಎಸ್‌. ಪೊನ್ನಣ್ಣ ವಾದ ಮಂಡಿಸಿದರು. ಖಾಲಿಯಿದ್ದ 150 ಮೋಟಾರು ವಾಹನಗಳ ಇನ್ಸ್‌  ಪೆಕ್ಟರ್‌  ಹುದ್ದೆಗಳ ನೇಮಕಾತಿಗೆ 2016ರ ಫೆ.4ರಂದು ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್‌ಸಿ) ಅರ್ಜಿ ಆಹ್ವಾನಿಸಿತ್ತು. 2019ರ ಜುಲೈ 4ರಂದು ಸಂಭಾವ್ಯ ಆಯ್ಕೆ ಪಟ್ಟಿ ಪ್ರಕಟಿಸಿತ್ತು. ನಂತರ ಗೋಕುಲ್‌ ದಾಸ್‌ ಹಾಗೂ ವೀರಣ್ಣಗೌಡ  ಪಾಟೀಲ್‌ ಅವರ ಅರ್ಜಿಗಳನ್ನು ಕೆಪಿಎಸ್‌ಸಿ ತಿರಸ್ಕರಿಸಿತ್ತು. ಈ ಕ್ರಮ ಪ್ರಶ್ನಿಸಿ ಅವರು ಕೆಎಟಿ ಮೆಟ್ಟಿಲೇರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next