Advertisement

ಬಜೆಟ್ ನಲ್ಲಿ ಕೃಷಿ ಕ್ಷೇತ್ರಕ್ಕೆ ಒತ್ತು ಕೊಡಲು ರೈತರಿಗೆ ಆದ್ಯತೆ

08:07 AM Feb 01, 2019 | Team Udayavani |

ನವದೆಹಲಿ: 2019-20ನೇ ಸಾಲಿನ ಕೇಂದ್ರ ಮಧ್ಯಂತರ ಬಜೆಟ್ ಅನ್ನು ಶುಕ್ರವಾರ ಹಂಗಾಮಿ ವಿತ್ತ ಸಚಿವ ಪಿಯೂಷ್ ಗೋಯಲ್ ಲೋಕಸಭೆಯಲ್ಲಿ ಮಂಡಿಸಿದ್ದು, ರೈತರಿಗೆ ಬಂಪರ್ ಕೊಡುಗೆ ಘೋಷಿಸುವ ಮೂಲಕ ಕೃಷಿ ಕ್ಷೇತ್ರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದೆ.

Advertisement

ಕೃಷಿ ಕ್ಷೇತ್ರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಸಣ್ಣ ಹಿಡುವಳಿದಾರರಿಗೆ ವರ್ಷಕ್ಕೆ ಆರು ಸಾವಿರ ರೂಪಾಯಿ ನೀಡಲು ನಿರ್ಧರಿಸಿದೆ. ಇದರಿಂದ ಸುಮಾರು 12 ಕೋಟಿ ಸಣ್ಣ ರೈತರಿಗೆ ಲಾಭವಾಗಲಿದೆ. ಇದಕ್ಕಾಗಿ ಸುಮಾರು 75 ಸಾವಿರ ಕೋಟಿ ರೂಪಾಯಿ ಮೀಸಲಿರಿಸಲು ಅಂದಾಜಿಸಲಾಗಿದೆ.

ಅಷ್ಟೇ ಅಲ್ಲ ನರೇಗಾ ಯೋಜನೆಯ ಅನುದಾನವನ್ನು 60 ಸಾವಿರ ಕೋಟಿ ರೂಪಾಯಿಗೆ ಹೆಚ್ಚಿಸಲಾಗಿದೆ.  ರೈತರು ಪ್ರಕೃತಿ ವಿಕೋಪದಿಂದ ನಷ್ಟ ಅನುಭವಿಸಿದ್ದಲ್ಲಿ ಶೇ.2ರಷ್ಟು ಬಡ್ಡಿ ವಿನಾಯಿತಿ ನೀಡುವುದಾಗಿ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next