Advertisement

ಸರ್ಕಾರ ಉಳಿಸಲು ಮಧ್ಯಂತರ ಚುನಾವಣೆ ಅಸ್ತ್ರ

11:15 PM Jun 25, 2019 | Lakshmi GovindaRaj |

ಮೈಸೂರು: ರಾಜ್ಯದ ಸಮ್ಮಿಶ್ರ ಸರ್ಕಾರ ಉಳಿಸಿಕೊಳ್ಳುವ ಸಲುವಾಗಿ ಎಚ್‌.ಡಿ.ದೇವೇಗೌಡ ಅವರು ಮಧ್ಯಂತರ ಚುನಾವಣೆ ಎಂಬ ತಂತ್ರದ ಅಸ್ತ್ರ ಪ್ರಯೋಗಿಸಿದ್ದಾರೆ ಎಂದು ಮಾಜಿ ಸಚಿವ ಎಸ್‌.ಸುರೇಶ್‌ಕುಮಾರ್‌ ಟೀಕಿಸಿದ್ದಾರೆ.

Advertisement

ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸದ್ಯದ ಪರಿಸ್ಥಿತಿಯಲ್ಲಿ ಮೂರು ಪಕ್ಷಗಳಿಗೂ ಮಧ್ಯಂತರ ಚುನಾವಣೆ ಬೇಕಿಲ್ಲ. ಆದರೂ ದೇವೇಗೌಡರು ಮಧ್ಯಂತರ ಚುನಾವಣೆಯ ಅಸ್ತ್ರ ಪ್ರಯೋಗಿಸಿರುವುದರ ಹಿಂದೆ ಸಮ್ಮಿಶ್ರ ಸರ್ಕಾರವನ್ನು ಉಳಿಸಿಕೊಳ್ಳುವ ತಂತ್ರ ಬಿಟ್ಟು ಬೇರೇನೂ ಇದ್ದಂತಿಲ್ಲ. ಯಡಿಯೂರಪ್ಪ ಯಾವುದೇ ಕಾರಣಕ್ಕೂ ಮಧ್ಯಂತರ ಚುನಾವಣೆ ಬೇಡ.

ನಿಮಗೆ ಆಡಳಿತ ನಡೆಸಲಾಗದಿದ್ದರೆ ನಮಗೆ ಬಿಟ್ಟು ಕೊಡಿ. ನಾವು ಆಡಳಿತ ನಡೆಸಿ, ತೋರಿಸುತ್ತೇವೆ ಎಂದಿದ್ದಾರೆ. ಇಷ್ಟರ ನಡುವೆಯೂ ಮಧ್ಯಂತರ ಚುನಾವಣೆ ಎದುರಾದರೆ ರಾಷ್ಟ್ರೀಯ ಪಕ್ಷವಾಗಿ ನಾವು ಕೂಡ ಚುನಾವಣೆ ಎದುರಿಸಲು ಸಿದ್ಧರಿದ್ದೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next