Advertisement

ಒಳ ಮೀಸಲಾತಿ: ಅಧ್ಯಯನ ನಡೆಸಿ ಶಿಫಾರಸು ನೀಡಲು ಸಂಪುಟ ಉಪ ಸಮಿತಿ ರಚಿಸಿದ ಸರ್ಕಾರ

01:44 PM Dec 13, 2022 | Team Udayavani |

ಬೆಂಗಳೂರು: ಪರಿಶಿಷ್ಟ ಜಾತಿಗಳ ವರ್ಗೀಕರಣದ (ಒಳ ಮೀಸಲಾತಿ) ಕುರಿತು ಪರಿಶೀಲಿಸಿ ಸೂಕ್ತ ಶಿಫಾರಸ್ಸುಗಳನ್ನು ಮಾಡಲು ರಾಜ್ಯ ಸರ್ಕಾರವು ಸಚಿವ ಸಂಪುಟದ ಒಂದು ಉಪ ಸಮಿತಿಯನ್ನು ರಚಿಸಿದೆ.

Advertisement

ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ಮಾಡಲಾಗಿದೆ. ಸಮಿತಿಯಲ್ಲಿ ಮಾಧುಸ್ವಾಮಿ ಅವರೊಂದಿಗೆ ನೀರಾವರಿ ಸಚಿವ ಗೋವಿಂದ ಕಾರಜೋಳ, ಮೀನುಗಾರಿಕೆ ಸಚಿವ ಎಸ್.ಅಂಗಾರ, ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಮತ್ತು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಸದಸ್ಯರಾಗಿದ್ದಾರೆ.

ಇದನ್ನೂ ಓದಿ:ರಸ್ತೆಯಲ್ಲಿ ನಿಂತು ಮಹಿಳೆ ಹಾಡಿದ ಹಾಡು ವೈರಲ್; ಅದ್ಭುತ ಧ್ವನಿಗೆ ಮತ್ತೊಬ್ಬ ರಾನು ಮಂಡಲ್‌ ಎಂದ ನೆಟ್ಟಿಗರು

ನ್ಯಾಯಮೂರ್ತಿ ಎ.ಜೆ.ಸದಾಶಿವ ಆಯೋಗದ ವರದಿ ಜಾರಿಗೆ ಆಗ್ರಹಿಸಿ ‘ಪರಿಶಿಷ್ಟ ಜಾತಿಯ ಒಳಮೀಸಲಾತಿ ಹೋರಾಟ ಜಾರಿ ಹೋರಾಟ ಸಮಿತಿ’ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next