Advertisement

Hassan; ಒಳ ಮೀಸಲಾತಿಯೇ ಜೆಡಿಎಸ್ ಗೆ ಚುನಾವಣೆ ಅಸ್ತ್ರ: ಎಚ್.ಡಿ ದೇವೇಗೌಡ

11:00 AM Jan 19, 2024 | Team Udayavani |

ಹಾಸನ: ಪರಿಶಿಷ್ಟ ಜಾತಿಯ ಒಳ ಮೀಸಲಾತಿ ಜಾರಿ ಹೊಣೆ ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಿ ರಾಜ್ಯ ಸರ್ಕಾರ ರಾಜಕೀಯ ಮಾಡಲು ಹೊರಟಿದೆ ಎಂದು ಮಾಜಿ ಪ್ರಧಾನಿ ದೇವೇಗೌಡರು ಅರೋಪಿಸಿದ್ದಾರೆ.

Advertisement

ನಾನು ಮುಖ್ಯಮಂತ್ರಿಯಾಗಿದ್ದಾಗ ನನ್ನ ಸಚಿವ ಸಂಪುಟದ ಸದಸ್ಯರಾಗಿದ್ದ ಸಿದ್ಧರಾಮಯ್ಯ ನೇತೃತ್ವದಲ್ಲಿಯೇ ಮೀಸಲಾತಿಯಲ್ಲಿ ವರ್ಗೀಕರಣ ಮಾಡಿ ಸಾಮಾಜಿಕ ನ್ಯಾಯ ಒದಗಿಸಲಾಗಿತ್ತು. ಮುಸಲ್ಮಾನ ರಿಗೆ ಮೀಸಲಾತಿ, ನಾಯಕ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿದ್ದು ನಾನು. ಈಗ ಪರಿಶಿಷ್ಟರ ಒಳ ಮೀಸಲಾತಿಯ ಹೊಣೆಯನ್ನು ಕೇಂದ್ರ ಸರ್ಕಾರಕ್ಕೆ ವರ್ಗಾಯಿಸಿ ಕಾಂಗ್ರೆಸ್ ಸರ್ಕಾರ ರಾಜಕೀಯ ಮಾಡಲು ಹೊರಟಿದೆ. ಲೋಕಸಭಾ ಚುನಾವಣೆಗೆ ಇದೇ ಒಳ ಮೀಸಲಾತಿ ವಿಷಯವನ್ನೇ ಮುಂದಿಟ್ಟುಕೊಂಡು ಹೋರಾಟ ಮಾಡುವೆ ಎಂದು ದೇವೇಗೌಡರು ಘೋಷಿಸಿದರು.

ಅಯೋಧ್ಯೆಗೆ ಜ.21 ರಂದು ಸಂಜೆಯೇ ವಿಶೇಷ ವಿಮಾನದಲ್ಲಿ ತೆರಳಿ ಜ.22 ರಂದು ರಾಮಮಂದಿರ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವೆ. ನನ್ನ ಪತ್ನಿ ಚನ್ನಮ್ಮ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಅವರೂ ಅಯೋಧ್ಯೆಗೆ ಬರುವರು ಎಂದು ದೇವೇಗೌಡರು ತಿಳಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next