Advertisement

ನುಹ್, ಗುರುಗ್ರಾಮ್‌ನಲ್ಲಿ ಇಂಟರ್ನೆಟ್ ನಿಷೇಧ, ಹೆಚ್ಚಿನ ಭದ್ರತೆ ಒದಗಿಸಲು ಕೇಂದ್ರಕ್ಕೆ ಮನವಿ

09:05 AM Aug 03, 2023 | Team Udayavani |

ನವದೆಹಲಿ/ಚಂಡೀಗಢ: ಹರಿಯಾಣದ ನುಹ್ ಮತ್ತು ರಾಜ್ಯದ ಇತರ ಕೆಲವು ಸ್ಥಳಗಳಲ್ಲಿ ಮೊಬೈಲ್ ಇಂಟರ್ನೆಟ್ ಮತ್ತು ಎಸ್‌ಎಂಎಸ್ ಸೇವೆಗಳನ್ನು ಆಗಸ್ಟ್ 5 ರವರೆಗೆ ಸ್ಥಗಿತಗೊಳಿಸಲಾಗುವುದು ಎಂದು ರಾಜ್ಯ ಸರ್ಕಾರ ಬುಧವಾರ ತಿಳಿಸಿದೆ. ಕೋಮು ಘರ್ಷಣೆ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಧಕ್ಕೆಯಾಗದಂತೆ ತಡೆಯಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

Advertisement

ನುಹ್ ಜೊತೆಗೆ, ಫರಿದಾಬಾದ್, ಪಲ್ವಾಲ್ ಮತ್ತು ಗುರುಗ್ರಾಮ್ ಜಿಲ್ಲೆಯ ಸೋಹ್ನಾ, ಪಟೌಡಿ ಮತ್ತು ಮಾನೇಸರ್ ಉಪ-ವಿಭಾಗದ ಪ್ರಾದೇಶಿಕ ನ್ಯಾಯವ್ಯಾಪ್ತಿಯಲ್ಲಿ ಸೇವೆಗಳು ಸ್ಥಗಿತಗೊಳ್ಳುತ್ತವೆ ಎನ್ನಲಾಗಿದೆ.

ಹರ್ಯಾಣಕ್ಕೆ ಬೇಕು ಹೆಚ್ಚಿನ ಪಡೆ: ಸಿಎಂ ಖಟ್ಟರ್‌

ಕೋಮುಗಲಭೆಗೆ ತುತ್ತಾಗಿರುವ ಹರ್ಯಾಣದ ನೂಹ್‌ ಜಿಲ್ಲೆಯಲ್ಲಿ ಇನ್ನೂ ಪರಿಸ್ಥಿತಿ ಬಿಗುವಿನಿಂದಲೇ ಕೂಡಿದೆ. ಇದೇ ವೇಳೆ ಪರಿಸ್ಥಿತಿ ನಿರ್ವಹಿಸುವ ನಿಟ್ಟಿನಲ್ಲಿ ಇನ್ನೂ ಹೆಚ್ಚುವರಿಯಾಗಿ ನಾಲ್ಕು ಕಂಪನಿಗಳಷ್ಟು ಅರೆಸೇನಾ ಪಡೆಗಳನ್ನು ನಿಯೋಜನೆ ಮಾಡುವಂತೆ ಮುಖ್ಯಮಂತ್ರಿ ಎಂ.ಎಲ್‌.ಖಟ್ಟರ್‌ ಕೇಂದ್ರಕ್ಕೆ ಮನವಿ ಮಾಡಿದ್ದಾರೆ.

ಗಲಭೆಯಲ್ಲಿ ಇದುವರೆಗೆ 6 ಮಂದಿ ಅಸುನೀಗಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ, ರಾಜ್ಯದ ವಿವಿಧ ಭಾಗಗಳಲ್ಲಿ ಆ.5ರ ವರೆಗೆ ಇಂಟರ್‌ನೆಟ್‌ ನಿಷೇಧಿಸಿ ಆದೇಶಿಸಲಾಗಿದೆ. ಮತ್ತೂಂದೆಡೆ, ಗಲಭೆ ಹಿನ್ನೆಲೆಯಲ್ಲಿ ಹಿಂಸಾಚಾರ ತಡೆಯುವ ನಿಟ್ಟಿನಲ್ಲಿ ದೆಹಲಿ, ಉತ್ತರ ಪ್ರದೇಶ ಸರ್ಕಾರಗಳಿಗೆ ಮು°ನೆಚ್ಚರಿಕೆ ವಹಿಸಬೇಕು ಎಂದು ಸುಪ್ರೀಂಕೋರ್ಟ್‌ ನೋಟಿಸ್‌ ನೀಡಿದೆ.

Advertisement

ಇದನ್ನೂ ಓದಿ: ಬಾದಾಮಿ ಜನ ಎಂದೂ ಮರೆಯದ ‘ಸಿದ್ದರಾಮಣ್ಣ’… ಕ್ಷೇತ್ರದ ಜನರ ಬಗ್ಗೆ ಇಂದಿಗೂ ಅಪಾರ ಕಾಳಜಿ

Advertisement

Udayavani is now on Telegram. Click here to join our channel and stay updated with the latest news.

Next