Advertisement

Jharkhand: ಸತತ 6 ಗಂಟೆ ಕಾಲ ಝಾರ್ಖಂಡ್‌ ಸಿಎಂ ಹೇಮಂತ್‌ ಸೊರೇನ್‌ ವಿಚಾರಣೆ

11:53 PM Jan 20, 2024 | Team Udayavani |

ರಾಂಚಿ: ಭೂ ಹಗರಣವೊಂದಕ್ಕೆ ಸಂಬಂಧಿಸಿದ ಹಣಕಾಸು ಅಕ್ರಮ ವರ್ಗಾವಣೆ ಆರೋಪದಲ್ಲಿ ಝಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೊರೇನ್‌ ಅವರನ್ನು ಶನಿವಾರ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಿದೆ. ಈ ಹಿಂದೆ ಏಳು ಬಾರಿ ಸಮನ್ಸ್‌ ನೀಡಿದ್ದರೂ ಹೇಮಂತ್‌ ಅವರು ವಿಚಾರಣೆಗೆ ಹಾಜರಾಗಿರಲಿಲ್ಲ.

Advertisement

8ನೇ ಸಮನ್ಸ್‌ ಜಾರಿಯಾದ ಬಳಿಕ ವಿಚಾರಣೆಗೆ ಒಪ್ಪಿದ್ದರು. ಅದರಂತೆ, ಶನಿವಾರ ಅವರ ಅಧಿಕೃತ ನಿವಾಸಕ್ಕೇ ಮಧ್ಯಾಹ್ನ ಆಗಮಿಸಿದ ಇ.ಡಿ. ಅಧಿಕಾರಿಗಳು ಸತತ 6 ಗಂಟೆಗೂ ಹೆಚ್ಚು ಕಾಲ ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ನಿವಾಸದ ಸುತ್ತಲೂ ಬಿಗಿಭದ್ರತೆ ಏರ್ಪಡಿಸಲಾಗಿತ್ತು. ಜತೆಗೆ, ಅವರ ಮನೆ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next