Advertisement

Puttur ಅಂತಾರಾಜ್ಯ ನಟೋರಿಯಸ್‌ ಕಳ್ಳಿ ಸೆರೆ

12:39 AM Mar 24, 2024 | Team Udayavani |

ಪುತ್ತೂರು: ತಮಿಳುನಾಡು ಮೂಲದ ಅಂತರ್‌ರಾಜ್ಯ ನಟೋರಿಯಸ್‌ ಕಳ್ಳಿ ಈಶ್ವರಿ (45)ಯನ್ನು ಪುತ್ತೂರು ನಗರ ಪೊಲೀಸರು ಬಂಧಿಸಿದ್ದಾರೆ.

Advertisement

ಬಂಧಿತರಿಂದ 6 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ. ಫೆ. 12ರಂದು ಪುತ್ತೂರು ನಗರದ ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದಲ್ಲಿ ತನ್ನ ಬ್ಯಾಗಿನಲ್ಲಿದ್ದ ಚಿನ್ನಾಭರಣಗಳು ಕಳವಾದ ಬಗ್ಗೆ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ರೇಷ್ಮಾ ಎನ್‌. ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪುತ್ತೂರು ನಗರ ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿ ಈಶ್ವರಿಯನ್ನು ಬಂಧಿಸಿದ್ದಾರೆ.

ಮರದಿಂದ ಬಿದ್ದು ವ್ಯಕ್ತಿ ಸಾವು
ಪುತ್ತೂರು: ಮರದಿಂದ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಅರಿಯಡ್ಕದಲ್ಲಿ ನಡೆದಿದೆ. ಅರಿಯಡ್ಕದ ಕೃಷ್ಣಪ್ಪ (55) ಮೃತಪಟ್ಟವರು. ಮನೆಯ ಹತ್ತಿರದ ತೋಟದಲ್ಲಿ ಮರವೊಂದರ ಗೆಲ್ಲು ಕಡಿಯುತ್ತಿರುವ ಸಂದರ್ಭ ಮರದಿಂದ ಬಿದ್ದು ಗಾಯಗೊಂಡಿದ್ದರು. ಅವರನ್ನು ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಶನಿವಾರ ಮೃತಪಟ್ಟಿದ್ದಾರೆ. ಅವರು ಪತ್ನಿ, ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next