Advertisement

ಕಾರ್ಮಿಕ ನಾಯಕ ಎಸ್.ಎಸ್ ಪ್ರಕಾಶಂ ನಿಧನ

11:07 AM Apr 30, 2022 | Team Udayavani |

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗದ ಅಧ್ಯಕ್ಷರಾದ ಎಸ್.ಎಸ್. ಪ್ರಕಾಶಂ ಶನಿವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.

Advertisement

ಪ್ರಕಾಶಂ ಅವರು ಪಕ್ಷದ ನಿಷ್ಠವಂತ ನಾಯಕ ಹಾಗೂ ಕಾರ್ಯಕರ್ತರಾಗಿದ್ದು, ಅವರ ನಿಧನದ ಸುದ್ದಿ ಕೇಳಿ ತೀವ್ರ ಬೇಸರವಾಗಿದೆ. ಕಾರ್ಮಿಕರ ಪರ ಕಾಳಜಿ ಹೊಂದಿದ್ದ ಪ್ರಕಾಶಂ ಅವರು ಉತ್ತಮ ಸಂಘಟಕರರೂ ಹೌದು. ಅವರ ನಿಧನದಿಂದ ಪಕ್ಷಕ್ಕೆ ನಷ್ಟವಾಗಿದೆ ಎಂದು ಹೇಳಿದರು.

ಇದನ್ನೂ ಓದಿ:200 ಉಗ್ರರನ್ನು ಎದುರಿಸಲಾಗದ ಹತ್ತು ಲಕ್ಷ ಸೇನಾ ಪಡೆಗಳು ಏನು ಮಾಡುತ್ತಿದೆ?: ಮೆಹಬೂಬಾ ಮುಫ್ತಿ

ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಅಗಲಿಕೆಯ ನೋವನ್ನು ಕುಟುಂಬ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರಿಗೆ ಭರಿಸುವ ಶಕ್ತಿಯನ್ನು ಕರುಣಿಸಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next