Advertisement
ಯಾವಾಗಲೂ ಹೂಡಿಕೆಯನ್ನು ಹೀಗೆ ನೋಡಬಹುದು. ಮೊದಲನೆಯದು ಹಣ ಹೂಡಿದಾಗ ಅಲ್ಲಿ ನಮ್ಮ ಕೆಲಸ ಇಲ್ಲ. ಉದಾಹರಣೆಗೆ ಒಂದು ನಿವೇಶನವನ್ನು ಹೂಡಿಕೆಯ ಕಾರಣಕ್ಕೆ ಕೊಂಡರೆ ಒಮ್ಮೆ ಹಣ ಹೂಡಿ, ಆ ಜಾಗದಲ್ಲಿ ಬೇಲಿ ಹಾಕಿ ಬಿಟ್ಟರೆ ನಮ್ಮ ಕೆಲಸ ಅರ್ಧ ಮುಗಿದಂತೆ. ಆನಂತರದ ದಿನಗಳಲ್ಲಿ, ಅಗೀಗ ಹೋಗಿ ಏನಾದರೂ ಒತ್ತುವರಿ ಆಯಿತಾ? ಏನಾದರೂ ಮಾಡಿದ್ದರಾ ಎಂದು ನೋಡಿಕೊಂಡು ಬಂದರೆ ಸಾಕು. ಹಾಗೆಯೇ ಬ್ಯಾಂಕಿನ ಭದ್ರತಾ ಠೇವಣಿಯಲ್ಲಿ ಇಟ್ಟರೂ, ಬಾಂಡ್ಗಳಲ್ಲಿ ಹಾಕಿದರೂ, ಮ್ಯೂಚುವಲ್ ಫಂಡ್ನಲ್ಲಿ ಹಾಕಿದರೂ, ಷೇರಿನಲ್ಲಿ ತೊಡಗಿಸಿದರೂ ಎಲ್ಲರಿಗೂ ಹೂಡಿಕೆಯಲ್ಲಿ ಹಣ ತೊಡಗಿಸಿದೆನೆಂಬ ಸಮಾಧಾನ ಇದ್ದೇ ಇರುತ್ತದೆ. ಹೀಗೆ ಹೂಡಿಕೆ ಮಾಡಿದ ಹಣ ಬೆಳೆಯಲೇಬೇಕು. ಅದು ಬೆಳೆದೇ ತೀರುತ್ತದೆ ಎಂಬ ನಂಬಿಕೆಯೂ ಇರುತ್ತದೆ. ಇನ್ನೊಂದು ರೀತಿಯ ಹೂಡಿಕೆ ಇರುತ್ತದೆ. ಇಲ್ಲಿ ಹಣ ತೊಡಗಿಸಿ ನಾವು ಕೆಲಸವನ್ನು ಮಾಡಬೇಕು. ಇಂತಹ ಹಣ ತೊಡಗಿಸುವಿಕೆ ಸ್ವಂತ ಉದ್ಯಮವಾಗಿ, ಉದ್ಯೋಗವಾಗಿ ರೂಪುಗೊಳ್ಳುತ್ತದೆ.
ನಾವು ಕೇವಲ ಹಣ ತೊಡಗಿಸಿದರೆ ಹೂಡಿಕೆದಾರರು ಆಗಬಹುದು. ಆದರೆ ಹಣ ತೊಡಗಿಸಿ ಕೆಲಸ ಮಾಡಿದರೆ ಉದ್ಯಮಿಗಳಾಗಿ ರೂಪಗೊಳ್ಳುತ್ತೇವೆ. ಸಣ್ಣ ಸಣ್ಣ ಉಳಿತಾಯ, ಸಣ್ಣ ಸಣ್ಣ ಕೆಲಸದಿಂದ ಆರಂಭವಾದ ಎಷ್ಟೋ ಉದ್ಯಮಗಳೇ ಈಗ ಎತ್ತರಕ್ಕೆ ಬೆಳೆದಿದೆ. ಎತ್ತರಕ್ಕೆ ಏರಬೇಕು ಎಂಬ ಆಸೆ ಮತ್ತು ಎತ್ತರೆತ್ತರ ಬೆಳೆಯ ಬಲ್ಲೆ ಎಂಬ ಭರವಸೆಯೇ ಎಲ್ಲ ಹಣ ಹೂಡಿಕೆಯ ಹಿಂದಿರುವ ಆಶಯ. ಹೂಡಿಕೆ ಜಾಣತನ
ಕನಕಪುರ ಸಮೀಪದ ಆ ಮಹಿಳೆ ತಾನು ಹಾಲು ಮಾರಿ ಬಂದ ಹಣವನ್ನು ಹಾಗೇ ಇಟ್ಟುಕೊಳ್ಳುತ್ತಾಳೆ. ಒಂದು ನಿರ್ದಿಷ್ಟ ಹಬ್ಬದ ಸಂದರ್ಭದಲ್ಲಿ ಕೆಲವು ವಿಶೇಷ ಸನ್ನಿವೇಷಗಳಲ್ಲಿ ಕುರಿಗಳು, ಅದರಲ್ಲೂ ಎಳೆಯ ಕುರಿ ಮರಿಗಳು ಕಡಿಮೆ ಬೆಲೆಗೆ ಸಿಗುತ್ತವಂತೆ. ಹಾಗೆ ಸಿಕ್ಕ ಕುರಿ ಮರಿಗಳು ಹಾಗೂ ಮರಿ
ಹಾಕಬಹುದಾದ ಕುರಿಗಳನ್ನು ಕೊಂಡು ತಂದು, ಬೆಳೆಸಿ ಅನಂತರ ಅದನ್ನು ಹೆಚ್ಚಿನ ದರಕ್ಕೆ ಮಾರುತ್ತಾಳೆ. ಕುರಿಗಳು ಹಾಗೂ ಮರಿಗಳನ್ನು ಹೀಗೆ ನಾಲ್ಕೈದು ತಿಂಗಳು ಸಾಕಿ ಮಾರುವುದರಿಂದ ಹಾಕಿದ ಹಣ ಅಧಿಕ ಲಾಭ ತರುತ್ತಿದೆಯಂತೆ.
Related Articles
Advertisement